Kannada News Karnataka Mysuru Mysore Dasara 2023: On September 5 HC Mahadevappa will welcome's Elephants at Mysore Palace
ಮೈಸೂರು ದಸರಾ 2023: ಸೆ.5 ರಂದು ಅಭಿಜಿತ್ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ
ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.
ಮೈಸೂರು ಸೆ.02 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023 (Mysore Dasara 2023) ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಈ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆ (ಸೆ.05)ಕ್ಕೆ ಮುಂದೂಡಲಾಗಿದೆ. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.
ಅರ್ಜುನ ಆನೆ ಈ ಬಾರಿಯ ದಸರಾ ಮಹೋತ್ಸವದ ಹಿರಿಯ ವಯಸ್ಸಿನ ಆನೆಯಾಗಿದೆ. ರೋಹಿತ್ ಅತ್ಯಂತ್ಯ ಕಿರಿಯ ವಯಸ್ಸಿನ ಆನೆ ಹಾಗೂ ಮೊದಲ ಬಾರಿಗೆ ದಸರಾದಲ್ಲಿ ಭಾಗಿಯಾಗುತ್ತಿದ್ದಾನೆ. ಕಂಜನ್, ಲಕ್ಷ್ಮಿ, ಹಿರಣ್ಯ ಆನೆಗಳಿಗೂ ಇದು ಮೊದಲ ದಸರಾ ಮಹೋತ್ಸವವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:16 am, Mon, 4 September 23
Ram
ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.