ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೆ ತಯಾರಿ ಆರಂಭವಾಗಿದೆ. ಅರಮನೆ ನಗರಿ ಜಗಮಗಿಸುವ ಲೈಟಿಂಗ್​ನಿಂದ ಕಂಗೊಳಿಸುತ್ತಿದೆ. ಮೈಸೂರು ದಸರಾ ವೀಕ್ಷಣೆಗೆ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ಸಿಗಲಿವೆ.

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ
ಮೈಸೂರು ದಸರಾ
Follow us
| Updated By: ವಿವೇಕ ಬಿರಾದಾರ

Updated on:Sep 27, 2024 | 10:42 AM

ಮೈಸೂರು, ಸೆಪ್ಟೆಂಬರ್​ 27: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ (Mysore Dasara 2024) ಟಿಕೆಟ್​ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ. ಎರಡು ರೀತಿಯ ಟಿಕೆಟ್​ಗಳಿವೆ. ಗೋಲ್ಡ್​ ಕಾರ್ಡ್​ (Gold Card) ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ ಮಾತ್ರ ಗೋಲ್ಡ್​ ಕಾರ್ಡ್​ ಮತ್ತು ಟಿಕೆಟ್ ​ಮಾರಾಟ ಮಾಡಲಾಗುತ್ತದೆ ಎಂದು ದಸರಾ ವಿಶೇಷ ಅಧಿಕಾರಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದರು.

ಗೋಲ್ಡ್​ ಕಾರ್ಡ್​, ಟಿಕೆಟ್​ ದರ

ದಸರಾ ಮತ್ತು ಯುವ ದಸರಾಗೆ ಟಿಕೆಟ್​ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಪ್ರತಿನಿತ್ಯ 1 ಸಾವಿರದಿಂದ 1500 ಗೋಲ್ಡ್ ಕಾರ್ಡ್​ಗಳನ್ನು ಮರಾಟ ಮಾಡಲಾಗುತ್ತದೆ. ಒಂದು ದಸರಾ ಗೋಲ್ಡ್ ಕಾರ್ಡ್​ಗೆ 6,500 ರೂಪಾಯಿ ನಿಗದಿ ಮಾಡಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್​ನಲ್ಲಿ ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ 3,500 ರೂ. ಬೆಲೆಯ ಟಿಕೆಟ್​ ಲಭ್ಯವಿದೆ. ಇನ್ನು, ಕೇವಲ ಪಂಜಿನ ಕವಾಯತು ವೀಕ್ಷಣೆಗೆ 1,000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.

ಟಿಕೆಟ್​ ಖರೀದಿ ಹೇಗೆ?

  • ಮೈಸೂರು ದಸರಾ ಅಧಿಕೃತ ವೆಬ್​ಸೈಟ್ https://www.mysoredasara.gov.in ಗೆ ಭೇಟಿ ನೀಡಿ.
  • ಹೋಮ್​ ಪೇಜ್​ನಲ್ಲಿ ಟಿಕೆಟ್​ಗಳು ಮತ್ತು ಲೈವ್​ ಅಂತ ಕಾಣುತ್ತದೆ.
  • ಅದರ ಮೇಲೆ ಕ್ಲಿಕ್​ ಮಾಡಿದ ನಂತರ ಆಯ್ಕೆ ಕೇಳುತ್ತದೆ.
  • ಟಿಕೆಟ್​ ಬುಕ್ಕಿಂಗ್​ ಮೇಲೆ ಕ್ಲಿಕ್​ ಮಾಡಿ.
  • ನಂತರ ಟಿಕೆಟ್​ ಬುಕ್ಕಿಂಗ್​ ಪೇಜ್​ ತೆರಯುತ್ತದೆ
  • ಕೆಳಗಡೆ ಬಂದರೆ ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಪಂಜಿನ ಕವಾಯಿತು ಬನ್ನಿಮಂಟಪ, ದಸರಾ 2024 ಜಂಬೂ ಸವಾರಿ ದರ ಸಮೇತ ಆಯ್ಕೆ ತೋರಿಸಲಾಗಿರುತ್ತದೆ.
  • ಬಳಿಕ, ಟಿಕೆಟ್​ ಖರೀದಿ ಎಂಬುವುದರ ಮೇಲೆ ಕ್ಲಿಕ್​ ಮಾಡಿ, ಮತ್ತೊಂದು ಪೇಜ್​ ತೆರೆಯುತ್ತದೆ. ಅಲ್ಲಿ ಎಷ್ಟು ಟಿಕೆಟ್​ ಅಂತ ಕ್ಲಿಕ್​ ಮಾಡಿ. ನಂತರ buy tickets ಮೇಲೆ ಕ್ಲಿಕ್​ ಮಾಡಿ. ನಿಮ್ಮ ಸಂಪೂರ್ಣ ಮಾಹಿತಿ ದಾಖಲಿಸಿ, ಹಣ ಪಾವತಿಸಿ ಟಿಕೆಟ್​ ಖರೀದಿಸಿ.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆ, ಅಶ್ವಾರೋಹಿ ಪಡೆಗೆ ಸಿಡಿಮದ್ದು ತಾಲೀಮು: ಬೆದರಿದ ಹೊಸ ಆನೆಗಳು, ಚದುರಿದ ಕುದುರೆಗಳು‌!

ಸಿಂಹಾಸನ ಜೋಡಣಾ ಕಾರ್ಯ ಆರಂಭ

ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದೆ. ಬೆಳಗ್ಗೆ 7.30ಕ್ಕೆ ನವಗ್ರಹ ಹೋಮ ಶಾಂತಿ ಪೂಜೆ ಮೂಲಕ ಸಿಂಹಾಸನ ಜೋಡಣಾ ಕಾರ್ಯ ಶುರುವಾಯಿತು. ಅರಮನೆ ದರ್ಬಾರ್ ಹಾಲ್​ನಲ್ಲಿ ಬೆಳಗ್ಗೆ 9.55 ರಿಂದ 10.25ರೊಳಗೆ ರತ್ನಖಚಿತ ಸಿಂಹಾಸನ ಜೋಡಿಸಲಾಗಿದೆ.  ಅಕ್ಟೋಬರ್​ 3ರಿಂದ ಯದುವೀರ್ ಒಡೆಯರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ.  ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಅರಮನೆ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Fri, 27 September 24

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್