ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೆ ತಯಾರಿ ಆರಂಭವಾಗಿದೆ. ಅರಮನೆ ನಗರಿ ಜಗಮಗಿಸುವ ಲೈಟಿಂಗ್​ನಿಂದ ಕಂಗೊಳಿಸುತ್ತಿದೆ. ಮೈಸೂರು ದಸರಾ ವೀಕ್ಷಣೆಗೆ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ಸಿಗಲಿವೆ.

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ
ಮೈಸೂರು ದಸರಾ
Edited By: ವಿವೇಕ ಬಿರಾದಾರ

Updated on: Sep 27, 2024 | 10:42 AM

ಮೈಸೂರು, ಸೆಪ್ಟೆಂಬರ್​ 27: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ (Mysore Dasara 2024) ಟಿಕೆಟ್​ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ. ಎರಡು ರೀತಿಯ ಟಿಕೆಟ್​ಗಳಿವೆ. ಗೋಲ್ಡ್​ ಕಾರ್ಡ್​ (Gold Card) ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ ಮಾತ್ರ ಗೋಲ್ಡ್​ ಕಾರ್ಡ್​ ಮತ್ತು ಟಿಕೆಟ್ ​ಮಾರಾಟ ಮಾಡಲಾಗುತ್ತದೆ ಎಂದು ದಸರಾ ವಿಶೇಷ ಅಧಿಕಾರಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದರು.

ಗೋಲ್ಡ್​ ಕಾರ್ಡ್​, ಟಿಕೆಟ್​ ದರ

ದಸರಾ ಮತ್ತು ಯುವ ದಸರಾಗೆ ಟಿಕೆಟ್​ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಪ್ರತಿನಿತ್ಯ 1 ಸಾವಿರದಿಂದ 1500 ಗೋಲ್ಡ್ ಕಾರ್ಡ್​ಗಳನ್ನು ಮರಾಟ ಮಾಡಲಾಗುತ್ತದೆ. ಒಂದು ದಸರಾ ಗೋಲ್ಡ್ ಕಾರ್ಡ್​ಗೆ 6,500 ರೂಪಾಯಿ ನಿಗದಿ ಮಾಡಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್​ನಲ್ಲಿ ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ 3,500 ರೂ. ಬೆಲೆಯ ಟಿಕೆಟ್​ ಲಭ್ಯವಿದೆ. ಇನ್ನು, ಕೇವಲ ಪಂಜಿನ ಕವಾಯತು ವೀಕ್ಷಣೆಗೆ 1,000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.

ಟಿಕೆಟ್​ ಖರೀದಿ ಹೇಗೆ?

  • ಮೈಸೂರು ದಸರಾ ಅಧಿಕೃತ ವೆಬ್​ಸೈಟ್ https://www.mysoredasara.gov.in ಗೆ ಭೇಟಿ ನೀಡಿ.
  • ಹೋಮ್​ ಪೇಜ್​ನಲ್ಲಿ ಟಿಕೆಟ್​ಗಳು ಮತ್ತು ಲೈವ್​ ಅಂತ ಕಾಣುತ್ತದೆ.
  • ಅದರ ಮೇಲೆ ಕ್ಲಿಕ್​ ಮಾಡಿದ ನಂತರ ಆಯ್ಕೆ ಕೇಳುತ್ತದೆ.
  • ಟಿಕೆಟ್​ ಬುಕ್ಕಿಂಗ್​ ಮೇಲೆ ಕ್ಲಿಕ್​ ಮಾಡಿ.
  • ನಂತರ ಟಿಕೆಟ್​ ಬುಕ್ಕಿಂಗ್​ ಪೇಜ್​ ತೆರಯುತ್ತದೆ
  • ಕೆಳಗಡೆ ಬಂದರೆ ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಪಂಜಿನ ಕವಾಯಿತು ಬನ್ನಿಮಂಟಪ, ದಸರಾ 2024 ಜಂಬೂ ಸವಾರಿ ದರ ಸಮೇತ ಆಯ್ಕೆ ತೋರಿಸಲಾಗಿರುತ್ತದೆ.
  • ಬಳಿಕ, ಟಿಕೆಟ್​ ಖರೀದಿ ಎಂಬುವುದರ ಮೇಲೆ ಕ್ಲಿಕ್​ ಮಾಡಿ, ಮತ್ತೊಂದು ಪೇಜ್​ ತೆರೆಯುತ್ತದೆ. ಅಲ್ಲಿ ಎಷ್ಟು ಟಿಕೆಟ್​ ಅಂತ ಕ್ಲಿಕ್​ ಮಾಡಿ. ನಂತರ buy tickets ಮೇಲೆ ಕ್ಲಿಕ್​ ಮಾಡಿ. ನಿಮ್ಮ ಸಂಪೂರ್ಣ ಮಾಹಿತಿ ದಾಖಲಿಸಿ, ಹಣ ಪಾವತಿಸಿ ಟಿಕೆಟ್​ ಖರೀದಿಸಿ.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆ, ಅಶ್ವಾರೋಹಿ ಪಡೆಗೆ ಸಿಡಿಮದ್ದು ತಾಲೀಮು: ಬೆದರಿದ ಹೊಸ ಆನೆಗಳು, ಚದುರಿದ ಕುದುರೆಗಳು‌!

ಸಿಂಹಾಸನ ಜೋಡಣಾ ಕಾರ್ಯ ಆರಂಭ

ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದೆ. ಬೆಳಗ್ಗೆ 7.30ಕ್ಕೆ ನವಗ್ರಹ ಹೋಮ ಶಾಂತಿ ಪೂಜೆ ಮೂಲಕ ಸಿಂಹಾಸನ ಜೋಡಣಾ ಕಾರ್ಯ ಶುರುವಾಯಿತು. ಅರಮನೆ ದರ್ಬಾರ್ ಹಾಲ್​ನಲ್ಲಿ ಬೆಳಗ್ಗೆ 9.55 ರಿಂದ 10.25ರೊಳಗೆ ರತ್ನಖಚಿತ ಸಿಂಹಾಸನ ಜೋಡಿಸಲಾಗಿದೆ.  ಅಕ್ಟೋಬರ್​ 3ರಿಂದ ಯದುವೀರ್ ಒಡೆಯರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ.  ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಅರಮನೆ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Fri, 27 September 24

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us