ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೆ ತಯಾರಿ ಆರಂಭವಾಗಿದೆ. ಅರಮನೆ ನಗರಿ ಜಗಮಗಿಸುವ ಲೈಟಿಂಗ್​ನಿಂದ ಕಂಗೊಳಿಸುತ್ತಿದೆ. ದಸರಾ ಉದ್ಘಾಟನೆ, ಜಂಬೂಸವಾರಿ ನಡೆಯುವ ದಿನಾಂಕವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ
ಮೈಸೂರು ದಸರಾ
Follow us
| Updated By: ವಿವೇಕ ಬಿರಾದಾರ

Updated on: Sep 28, 2024 | 9:15 AM

ಮೈಸೂರು, ಸೆಪ್ಟೆಂಬರ್​ 28: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ (Mysore Dasara) ಬೆರಳೆಣಿಕೆಯಷ್ಟು ದಿನಗಳು ಬಾಕಿ ಇವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ದಸರಾ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ.

ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ

ಯುವ ದಸರಾ

ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ) ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ