AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಏರ್​ ಶೋ, ಉಚಿತ ಪ್ರವೇಶ: ಈ ಸಮಯಕ್ಕೆ ಬಂದವರಿಗೆ ಮಾತ್ರ ಆದ್ಯತೆ

ಈ ಬಾರಿ ದಸರಾ ಸಂಭ್ರಮದಲ್ಲಿ ಏರ್ ಶೋ ಇರಲಿದೆ. ಸೂರ್ಯ ಕಿರಣ್ ತಂಡದಿಂದ2 ದಿನ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಲಿದೆ. ಅಕ್ಟೋಬರ್ 22 ರಂದು ಎಲ್ಲರಿಗೂ ಉಚಿತ ಪ್ರವೇಶ ನೀಡಲಾಗಿದೆ. 23ರಂದು ಪಂಜಿನ ಕವಾಯತು ಪಾಸ್‌ ಮೂಲಕ ಏರ್ ಶೋ ನೋಡಲು ವ್ಯವಸ್ಥೆ ಮಾಡಲಾಗ್ತಿದೆ.

ಮೈಸೂರು ದಸರಾ ಏರ್​ ಶೋ, ಉಚಿತ ಪ್ರವೇಶ: ಈ ಸಮಯಕ್ಕೆ ಬಂದವರಿಗೆ ಮಾತ್ರ ಆದ್ಯತೆ
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Oct 17, 2023 | 1:27 PM

Share

ಮೈಸೂರು, ಅ.17: ವಿಶ್ವವಿಖ್ಯಾತ ಮೈಸೂರು ದಸರಾ ಶುರುವಾಗಿದೆ (Mysuru Dasara 2023). ರಾಜ್ಯ, ಹೊರ ರಾಜ್ಯಗಳಿಂದ ಜನರು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಜಗಮಗಿಸುವ, ಕಲರ್ ಫುಲ್ ಮೈಸೂರು ನೋಡಿ ಸಂಭ್ರಮಿಸುತ್ತಿದ್ದಾರೆ. ಮತ್ತೊಂದೆಡೆ ಅಭಿಮನ್ಯು ನೇತೃತ್ವದ ಗಜಪಡೆ ಜಂಬೂ ಸವಾರಿಗೆ ತಾಲೀಮಿನಲ್ಲಿ ತೊಡಗಿದೆ. ಈ ಬಾರಿಯ ದಸರಾ ಉತ್ಸವದಲ್ಲಿ ಏರ್ ಶೋ ಸಹ (Dasara Air Show) ಇರಲಿದೆ. ಸೂರ್ಯ-ಕಿರಣ್ ತಂಡದಿಂದ ಎರಡು ದಿನ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಲಿದೆ. ಐದು ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಏರ್​ಶೋ ನಡೆಯುತ್ತಿದೆ.

ಹೌದು ಅ.22 ಹಾಗೂ ಅ.23ರಂದು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಏರ್ ಶೋ ನಡೆಯಲಿದೆ. ಅ.22 ರಂದು ನಡೆಯುವ ಏರ್​ ಶೋಗೆ ಪಾಸ್ ಇರುವುದಿಲ್ಲ. ಆ ದಿನ ಎಲ್ಲರಿಗೂ ಉಚಿತ ಪ್ರವೇಶ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತೆ. 3 ಗಂಟೆಯ ನಂತರ ಬಂದವರಿಗೆ ಪ್ರವೇಶವಿರುವುದಿಲ್ಲ. 23ರಂದು ಪಂಜಿನ ಕವಾಯತು ಪಾಸ್‌ ಮೂಲಕ ಏರ್ ಶೋ ನೋಡಲು ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಸ್ಟ್ರೀಟ್ ಫೆಸ್ಟಿವಲ್‌ಗೆ ಬ್ರೇಕ್ ಹಾಕಲಾಗಿದೆ. ಪರ ವಿರೋಧ ಹಿನ್ನೆಲೆ ಸ್ಟ್ರೀಟ್ ಫೆಸ್ಟಿವಲ್‌ಗೆ ಬ್ರೇಕ್ ಹಾಕಲಾಗಿದೆ. ದಸರಾ ಮುಗಿದ ನಂತರ ಬ್ರ್ಯಾಂಡ್ ಮೈಸೂರು ಹೆಸರಿನಲ್ಲಿ ನಿರಂತರ ಕಾರ್ಯಕ್ರಮಗಳಿರಲಿವೆ.

ಇದನ್ನೂ ಓದಿ: Mysuru Dasara 2023: ವಿಶ್ವವಿಖ್ಯಾತ ಮೈಸೂರು ದಸರಾ 3ನೇ ದಿನದ ಕಾರ್ಯಕ್ರಮಗಳ ವಿವರ

ಇಂದು ಮೈಸೂರು ಅರಮನೆಯ ವಸ್ತು ಪ್ರದರ್ಶನ ಆವರಣದಲ್ಲಿ 3ನೇ ಬಾರಿ ತಾಲೀಮು ನಡೆಸಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಫಿರಂಗಿ ಗಾಡಿಗಳಿಂದ ಒಟ್ಟು 21 ಬಾರಿ ಕುಶಾಲತೋಪು ಸಿಡಿಸಲಾಯ್ತು. 7 ಪಿರಂಗಿಗಳ ಮೂಲಕ ಮೂರು ಸುತ್ತಿನ ತಾಲೀಮು ಮಾಡಲಾಗಿದೆ. ತಾಲೀಮಿನಲ್ಲಿ 41 ಕುದುರೆಗಳು, ಜಂಬೂ ಸವಾರಿಯ ನೇತೃತ್ವ ವಹಿಸಿರುವ ಅಭಿಮನ್ಯು, 12 ಆನೆಗಳು ಭಾಗಿಯಾಗಿದ್ವು. ಮೊದಲ ಬಾರಿ ದಸರೆಗೆ ಕಾಡಿನಿಂದ ನಾಡಿಗೆ ಬಂದಿರುವ ಹಿರಣ್ಯ ಮತ್ತು ರೋಹಿತ ಆನೆಗಳು ತಾಲೀಮಿನಲ್ಲಿ ದೂರು ಉಳಿದಿವೆ.

ಅಕ್ಟೋಬರ್ 15 ರಿಂದ 24 ರವರೆಗೆ ಕುಪ್ಪಣ್ಣ ಪಾರ್ಕ್​ನಲ್ಲಿ ದಸರಾ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಬಾರಿ 2 ಲಕ್ಷ ಗುಲಾಬಿ ಹೂವುಗಳಿಂದ ಚಂದ್ರಯಾನದ ಪರಿಕಲ್ಪನೆಯ ಕಲಾಕೃತಿ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಚಾಮುಂಡೇಶ್ವರಿ ದೇವಿ ಹಾಗು ದೇವಸ್ಥಾನದ ಗೋಪುರ, ಸುವರ್ಣ ಕರ್ನಾಟಕ – ಕರ್ನಾಟಕದ ಶ್ರೀಮಂತ ಪರಂಪರೆ, ಕ್ರೀಡೆಗಳ ಥೀಮ್, ಕ್ರಿಕೆಟ್ ಹೂವಿನ ಕಲಾಕೃತಿ, ಅಂಬಾರಿ ಹೂವಿನ ಕಲಾಕೃತಿ, ಕಾಫಿ ಕಪ್ ಹೂವಿನ ಕಲಾಕೃತಿಗಳು ಈ ಬಾರಿಯ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳಾಗಿವೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು