AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ದಿನ ಮೇಳೈಸಿದ ಮೈಸೂರು ದಸರಾ ಕಾರ್ಯಕ್ರಮಗಳು: ಇಲ್ಲಿದೆ ವಿವರ

Mysore Dasara 2023: ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಸಾಕ್ಷಿ ಆಯಿತು. ಮಕ್ಕಳ ದಸರಾ ಅಂಗವಾಗಿ ಕಲಾಮಂದಿರದಲ್ಲಿ ಪುಟಾಣಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಶಾಲಾ ಮಕ್ಕಳು ಪ್ರಕೃತಿ, ದಸರಾ ಸಡಗರ, ಮಹಿಷ ಮರ್ದಿನಿ, ಪಾರಂಪರಿಕ ಸ್ಮಾರಕ, ಇತಿಹಾಸ ಪುರುಷರು, ಚಂದ್ರಯಾನ ಸೇರಿ ತರಹೇವಾರಿ ಚಿತ್ರ ಬಿಡಿಸಿ ಖುಷಿಪಟ್ಟರು.

ಮೂರನೇ ದಿನ ಮೇಳೈಸಿದ ಮೈಸೂರು ದಸರಾ ಕಾರ್ಯಕ್ರಮಗಳು: ಇಲ್ಲಿದೆ ವಿವರ
ದಸರಾ ಕವಿಗೋಷ್ಠಿ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 17, 2023 | 10:07 PM

Share

ಮೈಸೂರು, ಅಕ್ಟೋಬರ್ 17: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara) ಮೂರನೇ ದಿನವಾದ ಮಂಗಳವಾರವೂ ಹತ್ತುಹಲವು ಕಾರ್ಯಕ್ರಮಗಳು ಮೇಳೈಸಿವೆ. ದಸರಾ ಕವಿಗೋಷ್ಠಿಯಲ್ಲಿ ಸಾಹಿತಿ ಜಯಂತ್ ಕಾಯ್ಕಿಣಿ (Jayant Kaikini), ಕನ್ನಡದ ತವಕ- ತಲ್ಲಣಗಳನ್ನು ಪ್ರತಿಪಾದಿಸಿದರೆ ಮತ್ತೊಂದೆಡೆ, ಮಹಿಳಾ ದಸಾರದಲ್ಲಿ ಮಹಿಳೆಯರ ಡ್ಯಾನ್ಸ್, ಬಿಂದಿಗೆ ಓಟ ಹಾಗೂ ಹಗ್ಗಜಗ್ಗಾಟ ಕಾರ್ಯಕ್ರಮದಲ್ಲಿದಲ್ಲಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.

ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಸಾಕ್ಷಿ ಆಯಿತು. ಮಕ್ಕಳ ದಸರಾ ಅಂಗವಾಗಿ ಕಲಾಮಂದಿರದಲ್ಲಿ ಪುಟಾಣಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಶಾಲಾ ಮಕ್ಕಳು ಪ್ರಕೃತಿ, ದಸರಾ ಸಡಗರ, ಮಹಿಷ ಮರ್ದಿನಿ, ಪಾರಂಪರಿಕ ಸ್ಮಾರಕ, ಇತಿಹಾಸ ಪುರುಷರು, ಚಂದ್ರಯಾನ ಸೇರಿ ತರಹೇವಾರಿ ಚಿತ್ರ ಬಿಡಿಸಿ ಖುಷಿಪಟ್ಟರು. ಇನ್ನೂ ದಸರಾ ಕವಿಗೋಷ್ಠಿಗೆ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಚಾಲನೆ ನೀಡಿದ್ರು. ಇದೇವೇಳೆ ಮಾತನಾಡಿ, 50 ವರ್ಷಗಳ ಹಿಂದೆ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದೆ ಆಗ ಘಟಾನುಘಟಿ ಕವಿಗಳು ಭಾಗವಹಿಸಿದರು. ಅದರಂತೆ ಇಂದಿನ ಪಟ್ಟಿ 340 ಕವಿಗಳು ಇದ್ದಾರೆ ಇದನ್ನು ನೋಡಿದರೆ, ಕಾವ್ಯ ಈಗ ದೊಡ್ಡ ಮಟ್ಟದಲ್ಲಿ ಹಬ್ಬಿದೆ. ನಮ್ಮ ತಂದೆ ಎಲ್ಲಾ ಆಯಾಮಗಳಲ್ಲಿ ಬರೆದಿದ್ದರು. ಈಗ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ಕವಿತೆಗಳು ಬರುತ್ತಿವೆ. ಆದರೆ ನೇರ ನೆಟ್ ವರ್ಕ್ ಸಿಗದ ಸ್ಥಳದಲ್ಲಿ ಉತ್ತಮ ಕವಿತೆ ಉದ್ಬವವಾಗುತ್ತದೆ ಎಂದರು.

ಕಾರ್ಯಕ್ರಮಗಳು ಮೆರಗು ನೀಡಿದ್ವು, ಸಮೂಹ ನೃತ್ಯ ಸ್ಪರ್ಧೆ. ಸ್ತ್ರೀಶಕ್ತಿ ಸಂಘಗಳ ಮಹಿಳೆಯರು ಜಾನಪದ ಗೀತೆಗಳಿಗೆ ಭರ್ಜರಿ ಡ್ಯಾನ್ಸ್ ಮಾಡಿದರು. ಬಿಂದಿಗೆ ಹೊತ್ತು ಓಡುವ ಸ್ಪರ್ಧೆಯಂತೂ ಪ್ರೇಕ್ಷಕರಿಗೆ ಮನರಂಜನೆ ನೀಡಿತು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಾರಿಶಕ್ತಿಯ ಬಲ ಪ್ರದರ್ಶನವಾಯ್ತು. ಅಲ್ಲದೇ ದಸರಾ ವಸ್ತು ಪ್ರದರ್ಶನದಲ್ಲಿ ಮರಳು ಶಿಲ್ಪಗಳು ಪ್ರವಾಸಿಗರ ಮನಸೆಳೆದವು. ಸರ್ಕಾರದ ಐದು ಗ್ಯಾರಂಟಿಗಳು, ಚಂದ್ರಯಾನ-3ರ ವಿಕ್ರಂ ಲ್ಯಾಂಡರ್, ಪ್ರಗ್ಯಾನ್ ರೋವರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಮರಳಿನ ಶಿಲ್ಪಗಳು ವಸ್ತುಪ್ರದರ್ಶನಕ್ಕೆ ಮೆರಗು ನೀಡಿದವು.

ಇದನ್ನೂ ಓದಿ: ಕೊನೆಗೂ ದಸರಾ ಗೋಲ್ಡ್​ ಕಾರ್ಡ್​ ಬಿಡುಗಡೆಗೆ ಮುಹೂರ್ತ ಫಿಕ್ಸ್​; ಒಂದರ ಬೆಲೆ ಎಷ್ಟು ಗೊತ್ತಾ?

ಒಟ್ಟಾರೆ ಮೂರನೇ ದಿನದ ದಸರಾ ಸಂಭ್ರಮವೂ ಹತ್ತುಹಲವು ಕಾರ್ಯಕ್ರಮಗಳ ಮೂಲಕ ಪ್ರವಾಸಿಗರ ಗಮನಸೆಳೆದಿದೆ. ನಾಳೆಯಿಂದ ಯುವದಸರಾ ಸೇರಿ ಮತ್ತಷ್ಟು ಕಾರ್ಯಕ್ರಗಳು ಆರಂಭವಾಗಲಿದ್ದು ದಸರಾ ಮಹೋತ್ಸವ ರಂಗುಪಡೆದುಕೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು