Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು

ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಅವರು ಹೇಳಿದರು.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು
ಹೆಚ್​ಸಿ ಮಹಾದೇವಪ್ಪ, ಶಿವರಾಜ್​ ತಂಗಡಗಿ
Follow us
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2023 | 3:58 PM

ಮೈಸೂರು, ಅ.03: ವಿಶ್ವ ಪ್ರಸಿದ್ದ ಮೈಸೂರು  ದಸರಾ(Mysore Dasara) ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಗಜಪಡೆಗಳ ತಲಾಮು ಕೂಡ ಮುಗಿದಿದೆ. ಈ ಹಿನ್ನಲೆ ಇಂದು(ಅ.03) ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ (Shivaraj Tangadagi) ಹಾಗೂ  ಹೆಚ್​.ಸಿ ಮಹದೇವಪ್ಪ(HC mahadevappa) ಅವರು ಮೈಸೂರು ದಸರಾ  ಪೋಸ್ಟರ್​ ಮತ್ತು ವೆಬ್​​ಸೈಟ್​ನ್ನು ಬಿಡುಗಡೆ ಮಾಡಿದರು.

ಇನನು ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ‘ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಆವತ್ತೇ ದಸರಾದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಕೂಡ ನೀಡಲಿದ್ದೇವೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಬರದ ಛಾಯೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಸರಳವಾಗಿ ಮೈಸೂರು ದಸರಾ ಆಚರಿಸಲು ಚಿಂತನೆ

ಕಡಿಮೆ ವೆಚ್ಚದ ದಸರಾ ಆಚರಣೆ

ಇನ್ನು ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಿಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ