AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು

ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಅವರು ಹೇಳಿದರು.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು
ಹೆಚ್​ಸಿ ಮಹಾದೇವಪ್ಪ, ಶಿವರಾಜ್​ ತಂಗಡಗಿ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 03, 2023 | 3:58 PM

Share

ಮೈಸೂರು, ಅ.03: ವಿಶ್ವ ಪ್ರಸಿದ್ದ ಮೈಸೂರು  ದಸರಾ(Mysore Dasara) ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಗಜಪಡೆಗಳ ತಲಾಮು ಕೂಡ ಮುಗಿದಿದೆ. ಈ ಹಿನ್ನಲೆ ಇಂದು(ಅ.03) ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ (Shivaraj Tangadagi) ಹಾಗೂ  ಹೆಚ್​.ಸಿ ಮಹದೇವಪ್ಪ(HC mahadevappa) ಅವರು ಮೈಸೂರು ದಸರಾ  ಪೋಸ್ಟರ್​ ಮತ್ತು ವೆಬ್​​ಸೈಟ್​ನ್ನು ಬಿಡುಗಡೆ ಮಾಡಿದರು.

ಇನನು ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ‘ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಆವತ್ತೇ ದಸರಾದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಕೂಡ ನೀಡಲಿದ್ದೇವೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಬರದ ಛಾಯೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಸರಳವಾಗಿ ಮೈಸೂರು ದಸರಾ ಆಚರಿಸಲು ಚಿಂತನೆ

ಕಡಿಮೆ ವೆಚ್ಚದ ದಸರಾ ಆಚರಣೆ

ಇನ್ನು ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಿಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More