AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು

ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಅವರು ಹೇಳಿದರು.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು
ಹೆಚ್​ಸಿ ಮಹಾದೇವಪ್ಪ, ಶಿವರಾಜ್​ ತಂಗಡಗಿ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 03, 2023 | 3:58 PM

Share

ಮೈಸೂರು, ಅ.03: ವಿಶ್ವ ಪ್ರಸಿದ್ದ ಮೈಸೂರು  ದಸರಾ(Mysore Dasara) ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಗಜಪಡೆಗಳ ತಲಾಮು ಕೂಡ ಮುಗಿದಿದೆ. ಈ ಹಿನ್ನಲೆ ಇಂದು(ಅ.03) ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ (Shivaraj Tangadagi) ಹಾಗೂ  ಹೆಚ್​.ಸಿ ಮಹದೇವಪ್ಪ(HC mahadevappa) ಅವರು ಮೈಸೂರು ದಸರಾ  ಪೋಸ್ಟರ್​ ಮತ್ತು ವೆಬ್​​ಸೈಟ್​ನ್ನು ಬಿಡುಗಡೆ ಮಾಡಿದರು.

ಇನನು ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ‘ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಆವತ್ತೇ ದಸರಾದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಕೂಡ ನೀಡಲಿದ್ದೇವೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಬರದ ಛಾಯೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಸರಳವಾಗಿ ಮೈಸೂರು ದಸರಾ ಆಚರಿಸಲು ಚಿಂತನೆ

ಕಡಿಮೆ ವೆಚ್ಚದ ದಸರಾ ಆಚರಣೆ

ಇನ್ನು ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಿಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್