AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ; ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ತೂಕ ಪರಿಶೀಲನೆ, ಯಾವ ಆನೆ ಎಷ್ಟು ಭಾರ? ಇಲ್ಲಿದೆ ಮಾಹಿತಿ

ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿರುವ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದು, ಆನೆ ವಿಜಯ 2,830 ಕೆಜಿ ತೂಕವನ್ನು ಹೊಂದಿದೆ. ಧನಂಜಯ 4,940 ಕೆಜಿ, ಮಹೇಂದ್ರ 4,530 ಕೆಜಿ, ಭೀಮ 4,370 ಕೆಜಿ, ಕಂಜನ್ 4,240 ಕೆಜಿ ಮತ್ತು ಗೋಪಿ 5,080 ಕೆಜಿ ತೂಕ ಹೊಂದಿವೆ

Follow us
ರಾಮ್​, ಮೈಸೂರು
| Updated By: Ganapathi Sharma

Updated on: Sep 06, 2023 | 5:53 PM

ಮೈಸೂರು, ಸೆಪ್ಟೆಂಬರ್ 6: ಪ್ರಸಿದ್ಧ ಮೈಸೂರು ದಸರಾ (Mysore Dasara 2023) ಮಹೋತ್ಸವದ ಜಂಬೂ ಸವಾರಿಯಲ್ಲಿ (Jamboo Savari) ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಎಂಟು ಆನೆಗಳ ತೂಕ ಪರಿಶೀಲನಾ ಪ್ರಕ್ರಿಯೆ ಬುಧವಾರ ನಡೆಸಲಾಯಿತು. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿ ವೇಬ್ರಿಡ್ಜ್‌ನಲ್ಲಿ ನಿತ್ಯ ನಡೆಯುವ ಆನೆಗಳ ತಾಲೀಮು ವೇಳೆ ತೂಕ ತಪಾಸಣೆ ಪ್ರಕ್ರಿಯೆ ನಡೆಯಿತು. ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿರುವ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದು, ಆನೆ ವಿಜಯ 2,830 ಕೆಜಿ ತೂಕವನ್ನು ಹೊಂದಿದೆ. ಧನಂಜಯ 4,940 ಕೆಜಿ, ಮಹೇಂದ್ರ 4,530 ಕೆಜಿ, ಭೀಮ 4,370 ಕೆಜಿ, ಕಂಜನ್ 4,240 ಕೆಜಿ ಮತ್ತು ಗೋಪಿ 5,080 ಕೆಜಿ ತೂಕ ಹೊಂದಿವೆ.

ಆನೆಗಳ ಆರೋಗ್ಯ ಮತ್ತು ತೂಕವನ್ನು ಕಾಪಾಡಿಕೊಳ್ಳಲು ದಸರಾ ಮೆರವಣಿಗೆ ಮುಗಿಯುವವರೆಗೆ ವಿಶೇಷ ಆಹಾರಕ್ರಮವನ್ನು ಅನುಸರಿಸುವಂತೆ ಮಾಡಲಾಗುತ್ತದೆ.

ಆನೆಗಳು ಮೈಸೂರು ಅರಮನೆಯ ಉತ್ತರ ದ್ವಾರದಿಂದ 3 ಕಿಲೋಮೀಟರ್‌ಗಳಷ್ಟು ನಡೆದು ಧನ್ವಂತರಿ ರಸ್ತೆಯಲ್ಲಿರುವ ತೂಕ ಪರೀಕ್ಷೆ ಸ್ಥಳವನ್ನು ತಲುಪಿದವು. ಆನೆಗಳಿಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ವಾಹನಗಳ ಬೆಂಗಾವಲು ಇತ್ತು. ಆನೆಗಳ ಉಗುರುಗಳು ಮತ್ತು ಮೆರವಣಿಗೆಯ ಮಾರ್ಗವನ್ನು ಸ್ಕ್ಯಾನ್ ಮಾಡಲಾದ ಮ್ಯಾಗ್ನೆಟಿಕ್ ಸ್ಕ್ಯಾನರ್‌ಗಳನ್ನು ಬೆಂಗಾವಲು ವಾಹನಗಳಿಗೆ ಜೋಡಿಸಲಾಗಿತ್ತು.

ಇದನ್ನೂ ಓದಿ: ಮೈಸೂರು ದಸರಾವನ್ನು ವ್ಯವಸ್ಥಿತವಾಗಿ ನೆರವೇರಿಸುವಂತೆ ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

ಮೈಸೂರು ದಸರಾ ಸಮೀಪಿಸುತ್ತಿರುವಂತೆಯೇ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸುವಂತೆ ಸಚಿವ ಡಾ. ಹೆಚ್​​​ಸಿ ಮಹದೇವಪ್ಪ ಅವರು ಮಂಗಳವಾರದಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಸಾರುವ ದಸರಾವನ್ನು ಜನರ ಉತ್ಸವವನ್ನಾಗಿ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚನೆ ನೀಡಿದ್ದರು.

ಈ ಮಧ್ಯೆ, ದಸರಾ ಪುಷ್ಪ ಪ್ರದರ್ಶನಕ್ಕೂ ಭರದಿಂದ ಸಿದ್ಧತೆ ನಡೆಯುತ್ತಿದ್ದು, ವೈವಿಧ್ಯಮಯ ಹೂವುಗಳು ಮತ್ತು ಅಲಂಕಾರಿಕ ಸಸ್ಯಗಳ ಸಂಗ್ರಹ, ಪೋಷಣೆ ಪ್ರಕ್ರಿಯೆ ನಡೆಯುತ್ತಿದೆ. ಈ ವರ್ಷ ಪುಷ್ಪ ಪ್ರದರ್ಶನದಲ್ಲಿ ಬರೋಬ್ಬರಿ 85,000 ಹೂದಾನಿಗಳು ಇರಲಿವೆ ಎಂದು ಮೂಲಗಳು ಈಗಾಗಲೇ ತಿಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್