ಮೈಸೂರು ದಸರಾ; ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ತೂಕ ಪರಿಶೀಲನೆ, ಯಾವ ಆನೆ ಎಷ್ಟು ಭಾರ? ಇಲ್ಲಿದೆ ಮಾಹಿತಿ

ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿರುವ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದು, ಆನೆ ವಿಜಯ 2,830 ಕೆಜಿ ತೂಕವನ್ನು ಹೊಂದಿದೆ. ಧನಂಜಯ 4,940 ಕೆಜಿ, ಮಹೇಂದ್ರ 4,530 ಕೆಜಿ, ಭೀಮ 4,370 ಕೆಜಿ, ಕಂಜನ್ 4,240 ಕೆಜಿ ಮತ್ತು ಗೋಪಿ 5,080 ಕೆಜಿ ತೂಕ ಹೊಂದಿವೆ

Follow us
| Updated By: ಗಣಪತಿ ಶರ್ಮ

Updated on: Sep 06, 2023 | 5:53 PM

ಮೈಸೂರು, ಸೆಪ್ಟೆಂಬರ್ 6: ಪ್ರಸಿದ್ಧ ಮೈಸೂರು ದಸರಾ (Mysore Dasara 2023) ಮಹೋತ್ಸವದ ಜಂಬೂ ಸವಾರಿಯಲ್ಲಿ (Jamboo Savari) ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಎಂಟು ಆನೆಗಳ ತೂಕ ಪರಿಶೀಲನಾ ಪ್ರಕ್ರಿಯೆ ಬುಧವಾರ ನಡೆಸಲಾಯಿತು. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿ ವೇಬ್ರಿಡ್ಜ್‌ನಲ್ಲಿ ನಿತ್ಯ ನಡೆಯುವ ಆನೆಗಳ ತಾಲೀಮು ವೇಳೆ ತೂಕ ತಪಾಸಣೆ ಪ್ರಕ್ರಿಯೆ ನಡೆಯಿತು. ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿರುವ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದು, ಆನೆ ವಿಜಯ 2,830 ಕೆಜಿ ತೂಕವನ್ನು ಹೊಂದಿದೆ. ಧನಂಜಯ 4,940 ಕೆಜಿ, ಮಹೇಂದ್ರ 4,530 ಕೆಜಿ, ಭೀಮ 4,370 ಕೆಜಿ, ಕಂಜನ್ 4,240 ಕೆಜಿ ಮತ್ತು ಗೋಪಿ 5,080 ಕೆಜಿ ತೂಕ ಹೊಂದಿವೆ.

ಆನೆಗಳ ಆರೋಗ್ಯ ಮತ್ತು ತೂಕವನ್ನು ಕಾಪಾಡಿಕೊಳ್ಳಲು ದಸರಾ ಮೆರವಣಿಗೆ ಮುಗಿಯುವವರೆಗೆ ವಿಶೇಷ ಆಹಾರಕ್ರಮವನ್ನು ಅನುಸರಿಸುವಂತೆ ಮಾಡಲಾಗುತ್ತದೆ.

ಆನೆಗಳು ಮೈಸೂರು ಅರಮನೆಯ ಉತ್ತರ ದ್ವಾರದಿಂದ 3 ಕಿಲೋಮೀಟರ್‌ಗಳಷ್ಟು ನಡೆದು ಧನ್ವಂತರಿ ರಸ್ತೆಯಲ್ಲಿರುವ ತೂಕ ಪರೀಕ್ಷೆ ಸ್ಥಳವನ್ನು ತಲುಪಿದವು. ಆನೆಗಳಿಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ವಾಹನಗಳ ಬೆಂಗಾವಲು ಇತ್ತು. ಆನೆಗಳ ಉಗುರುಗಳು ಮತ್ತು ಮೆರವಣಿಗೆಯ ಮಾರ್ಗವನ್ನು ಸ್ಕ್ಯಾನ್ ಮಾಡಲಾದ ಮ್ಯಾಗ್ನೆಟಿಕ್ ಸ್ಕ್ಯಾನರ್‌ಗಳನ್ನು ಬೆಂಗಾವಲು ವಾಹನಗಳಿಗೆ ಜೋಡಿಸಲಾಗಿತ್ತು.

ಇದನ್ನೂ ಓದಿ: ಮೈಸೂರು ದಸರಾವನ್ನು ವ್ಯವಸ್ಥಿತವಾಗಿ ನೆರವೇರಿಸುವಂತೆ ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

ಮೈಸೂರು ದಸರಾ ಸಮೀಪಿಸುತ್ತಿರುವಂತೆಯೇ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸುವಂತೆ ಸಚಿವ ಡಾ. ಹೆಚ್​​​ಸಿ ಮಹದೇವಪ್ಪ ಅವರು ಮಂಗಳವಾರದಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಸಾರುವ ದಸರಾವನ್ನು ಜನರ ಉತ್ಸವವನ್ನಾಗಿ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚನೆ ನೀಡಿದ್ದರು.

ಈ ಮಧ್ಯೆ, ದಸರಾ ಪುಷ್ಪ ಪ್ರದರ್ಶನಕ್ಕೂ ಭರದಿಂದ ಸಿದ್ಧತೆ ನಡೆಯುತ್ತಿದ್ದು, ವೈವಿಧ್ಯಮಯ ಹೂವುಗಳು ಮತ್ತು ಅಲಂಕಾರಿಕ ಸಸ್ಯಗಳ ಸಂಗ್ರಹ, ಪೋಷಣೆ ಪ್ರಕ್ರಿಯೆ ನಡೆಯುತ್ತಿದೆ. ಈ ವರ್ಷ ಪುಷ್ಪ ಪ್ರದರ್ಶನದಲ್ಲಿ ಬರೋಬ್ಬರಿ 85,000 ಹೂದಾನಿಗಳು ಇರಲಿವೆ ಎಂದು ಮೂಲಗಳು ಈಗಾಗಲೇ ತಿಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ