AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬಂದ್​​ಗೆ ಜಿಲ್ಲಾಧಿಕಾರಿ ಆದೇಶ; 15 ಲಕ್ಷ ದಂಡ

ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್​​ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು. ಮುಂದೇನಾಯ್ತು ಓದಿ...

ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬಂದ್​​ಗೆ ಜಿಲ್ಲಾಧಿಕಾರಿ ಆದೇಶ; 15 ಲಕ್ಷ ದಂಡ
ಮೈಸೂರು ಖಾಸಗಿ ಆಸ್ಪತ್ರೆ
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on:Nov 22, 2023 | 9:40 PM

Share

ಮೈಸೂರು ನ.22: ನಗರದ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯ ಅಧಿಕಾರಿ ಆಸ್ಪತ್ರೆಗೆ (Hospital) ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು (Mysore) ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗೆ ಬೀಗ ಏಕೆ?

ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್​​ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮೈಸೂರಿನ ರವಿಗೌಡ ಎಂಬುವರು ಆರೋಗ್ಯ ಇಲಾಖೆಯ ಜಾಗೃತಕೋಶದ ಜಾಗೃತಾಧಿಕಾರಿಗೆ ದೂರು ನೀಡಿದ್ದರು. ವೈದ್ಯರ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಆಸ್ಪತ್ರೆಯನ್ನು ಬಂದ್​ ಮಾಡಿಸಿಬೇಕೆಂದು ದೂರಿನಲ್ಲಿ ದಾಖಲಿಸಿದ್ದರು. ಈ ಸಂಬಂಧ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಡಾ.ಚಂದ್ರಶೇಖರ್ ವಿರುದ್ಧ ತನಿಖೆ ನಡೆಸಲು ಆದೇಶಿಸಿತ್ತು.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಧರಣಿ

ತನಿಖೆ ವೇಳೆ ವೈದ್ಯ ಚಂದ್ರಶೇಖರ್ ಐದು ಅಂಶಗಳ ಲೋಪ ಎಸಗಿರುವುದು ಸಾಬೀತಾಗಿದೆ. 1. ಡಾ.ಚಂದ್ರಶೇಖರ್ ಅನಸ್ತೇಷಿಯ ವೈದ್ಯರಲ್ಲ. 2. ಅವಿದ್ಯಾವಂತ ನರ್ಸಿಂಗ್ ಸ್ಟಾಫ್ ನೇಮಕ ಮಾಡಿಕೊಂಡಿದ್ದಾರೆ. 3. ಅನಸ್ತೇಷಿಯಾ ವಿಷಯದಲ್ಲಿ ವಿದ್ಯಾರ್ಹತೆ ಹೊಂದಿಲ್ಲ. 4. ಅನಧಿಕೃತವಾಗಿ ಬಿಎಎಂಎಸ್ ವ್ಯಾಸಂಗ ಮಾಡಿರುವರನ್ನು ನೇಮಕ ಮಾಡಿಕೊಂಡಿದ್ದಾರೆ. 5. ರವಿಗೌಡ ದೊಡ್ಡಪ್ಪ ಶಿವಣ್ಣ ಸಾವಿಗೆ ಕಾರಣವಾಗಿರುವುದು. ಈ ಹಿನ್ನೆಲೆಯಲ್ಲಿ ಮೃತ ಕುಟುಂಬಸ್ಥರಿಗೆ 15 ಲಕ್ಷದ 60 ಸಾವಿರ ರೂ. ಪರಿಹಾರ ನೀಡುವಂತೆ 2023 ರ ಆಗಸ್ಟ್​ 8 ರಂದು ಆದೇಶ ಹೊರಡಿಸಲಾಗಿತ್ತು.

ಈ ಬಗ್ಗೆ ಆದಿತ್ಯ ಅಧಿಕಾರಿ ಆಸ್ಪತ್ರೆ  ವೈದ್ಯ  ಡಾ.ಚಂದ್ರಶೇಖರ್ ಮಾತನಾಡಿ,  ನಮಗೆ ಜಿಲ್ಲಾಧಿಕಾರಿಯಿಂದ ಯಾವುದೇ ಆದೇಶ ಬಂದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Wed, 22 November 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ