AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬಂದ್​​ಗೆ ಜಿಲ್ಲಾಧಿಕಾರಿ ಆದೇಶ; 15 ಲಕ್ಷ ದಂಡ

ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್​​ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು. ಮುಂದೇನಾಯ್ತು ಓದಿ...

ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬಂದ್​​ಗೆ ಜಿಲ್ಲಾಧಿಕಾರಿ ಆದೇಶ; 15 ಲಕ್ಷ ದಂಡ
ಮೈಸೂರು ಖಾಸಗಿ ಆಸ್ಪತ್ರೆ
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 22, 2023 | 9:40 PM

Share

ಮೈಸೂರು ನ.22: ನಗರದ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯ ಅಧಿಕಾರಿ ಆಸ್ಪತ್ರೆಗೆ (Hospital) ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು (Mysore) ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗೆ ಬೀಗ ಏಕೆ?

ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್​​ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮೈಸೂರಿನ ರವಿಗೌಡ ಎಂಬುವರು ಆರೋಗ್ಯ ಇಲಾಖೆಯ ಜಾಗೃತಕೋಶದ ಜಾಗೃತಾಧಿಕಾರಿಗೆ ದೂರು ನೀಡಿದ್ದರು. ವೈದ್ಯರ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಆಸ್ಪತ್ರೆಯನ್ನು ಬಂದ್​ ಮಾಡಿಸಿಬೇಕೆಂದು ದೂರಿನಲ್ಲಿ ದಾಖಲಿಸಿದ್ದರು. ಈ ಸಂಬಂಧ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಡಾ.ಚಂದ್ರಶೇಖರ್ ವಿರುದ್ಧ ತನಿಖೆ ನಡೆಸಲು ಆದೇಶಿಸಿತ್ತು.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಧರಣಿ

ತನಿಖೆ ವೇಳೆ ವೈದ್ಯ ಚಂದ್ರಶೇಖರ್ ಐದು ಅಂಶಗಳ ಲೋಪ ಎಸಗಿರುವುದು ಸಾಬೀತಾಗಿದೆ. 1. ಡಾ.ಚಂದ್ರಶೇಖರ್ ಅನಸ್ತೇಷಿಯ ವೈದ್ಯರಲ್ಲ. 2. ಅವಿದ್ಯಾವಂತ ನರ್ಸಿಂಗ್ ಸ್ಟಾಫ್ ನೇಮಕ ಮಾಡಿಕೊಂಡಿದ್ದಾರೆ. 3. ಅನಸ್ತೇಷಿಯಾ ವಿಷಯದಲ್ಲಿ ವಿದ್ಯಾರ್ಹತೆ ಹೊಂದಿಲ್ಲ. 4. ಅನಧಿಕೃತವಾಗಿ ಬಿಎಎಂಎಸ್ ವ್ಯಾಸಂಗ ಮಾಡಿರುವರನ್ನು ನೇಮಕ ಮಾಡಿಕೊಂಡಿದ್ದಾರೆ. 5. ರವಿಗೌಡ ದೊಡ್ಡಪ್ಪ ಶಿವಣ್ಣ ಸಾವಿಗೆ ಕಾರಣವಾಗಿರುವುದು. ಈ ಹಿನ್ನೆಲೆಯಲ್ಲಿ ಮೃತ ಕುಟುಂಬಸ್ಥರಿಗೆ 15 ಲಕ್ಷದ 60 ಸಾವಿರ ರೂ. ಪರಿಹಾರ ನೀಡುವಂತೆ 2023 ರ ಆಗಸ್ಟ್​ 8 ರಂದು ಆದೇಶ ಹೊರಡಿಸಲಾಗಿತ್ತು.

ಈ ಬಗ್ಗೆ ಆದಿತ್ಯ ಅಧಿಕಾರಿ ಆಸ್ಪತ್ರೆ  ವೈದ್ಯ  ಡಾ.ಚಂದ್ರಶೇಖರ್ ಮಾತನಾಡಿ,  ನಮಗೆ ಜಿಲ್ಲಾಧಿಕಾರಿಯಿಂದ ಯಾವುದೇ ಆದೇಶ ಬಂದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Wed, 22 November 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?