AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪ-ಅಮೂಲ್ಯ: ತಮಗೆ ಬಂದ ಲೈಬ್ರರಿ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿ, ಮೌಲ್ಯ ಹೆಚ್ಚಿಸಿದ ಅಧಿಕಾರಿ!

Mysore District Library: ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಅವರು 2023ನೇ ಸಾಲಿನ ಅತ್ಯುತ್ತಮ ಡಿಜಿಟಲ್ ಓದುಗರ ನೋಂದಣಿ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಆ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿ ಪರಮೇಶ್ ಅವರಿಗೆ ನೀಡುವಂತೆ ಮಂಜುನಾಥ್‌ ಅವರು ಸಾರ್ವಜನಿಕೆ ಗ್ರಂಥಾಲಯ ಇಲಾಖೆಗೆ ಪತ್ರ ಬರೆದು ಕೋರಿದರು.

ಅಪರೂಪ-ಅಮೂಲ್ಯ: ತಮಗೆ ಬಂದ ಲೈಬ್ರರಿ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿ, ಮೌಲ್ಯ ಹೆಚ್ಚಿಸಿದ ಅಧಿಕಾರಿ!
ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಮತ್ತು ಪರಮೇಶ್
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​|

Updated on: Aug 12, 2023 | 10:01 AM

Share

ಮೈಸೂರು, ಆಗಸ್ಟ್​ 12: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಮಗೆ ಒಲಿದು ಬಂದ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿಗೆ ನೀಡಿ, ಪ್ರಶಸ್ತಿಯ ಮೌಲ್ಯ ಮತ್ತು ಮಹತ್ವವನ್ನು ಹೆಚ್ಚಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಅಧಿಕಾರಿಯ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಈ ಅಪರೂಪದ ಪ್ರಕರಣ ನಡೆದಿದೆ. ಮೈಸೂರು (Mysore) ಜಿಲ್ಲಾ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ಬಿ ಮಂಜುನಾಥ್ ಅವರು ತಮಗೆ ಬಂದ ಪ್ರಶಸ್ತಿಯನ್ನು (Library Award) ಸಹೋದ್ಯೋಗಿಗೆ (Colleague) ನೀಡಿ, ಅವರ ಸೇವಾ ಕಾರ್ಯವನ್ನು ಗೌರವಿಸಿದ್ದಾರೆ.

ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಅವರು 2023ನೇ ಸಾಲಿನ ಅತ್ಯುತ್ತಮ ಡಿಜಿಟಲ್ ಓದುಗರ ನೋಂದಣಿ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಆ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿ ಪರಮೇಶ್ ಅವರಿಗೆ ನೀಡುವಂತೆ ಮಂಜುನಾಥ್‌ ಅವರು ಸಾರ್ವಜನಿಕೆ ಗ್ರಂಥಾಲಯ ಇಲಾಖೆಗೆ ಪತ್ರ ಬರೆದು ಕೋರಿದರು. ಅಂದಹಾಗೆ ಪರಮೇಶ್ ಅವರು ಹೆಚ್ ಡಿ ಕೋಟೆ ಗ್ರಂಥಾಲಯ ಪ್ರಭಾರ ಅಧಿಕಾರಿಯಾಗಿದ್ದಾರೆ.

ಲೈಬ್ರರಿ ಪ್ರಶಸ್ತಿ ವರ್ಗಾಯಿಸಿಕೊಂಡ ಪರಮೇಶ್ ಅವರ ಸಾಧನೆ ಏನು ಗೊತ್ತಾ?

ಇನ್ನು, ಪರಮೇಶ್ ಅವರ ಸಾಧನೆಯೇನೆಂದರೆ ಒಟ್ಟು 23 ಲಕ್ಷ ನೋಂದಣಿಯಲ್ಲಿ 12 ಲಕ್ಷ ನೋಂದಣಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಮೇಶ್‌ ಅವರಿಗೆ ಪ್ರಶಸ್ತಿಯನ್ನು ವರ್ಗಾಯಿಸಲು ಹಿರಿಯ ಅಧಿಕಾರಿ ಮಂಜುನಾಥ್‌ ಕೋರಿದ್ದರು. ಬಿ ಮಂಜುನಾಥ್ ಅವರು 2015ರಲ್ಲಿಯೂ ಇದೇ ಪ್ರಶಸ್ತಿಗೆ ಭಾಜನರಾಗಿದ್ದರು ಎಂಬುದು ಗಮನಾರ್ಹ. ಮಂಜುನಾಥ್ ಅವರ ನಿರ್ಧಾರಕ್ಕೆ ಈಗ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ