AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪ-ಅಮೂಲ್ಯ: ತಮಗೆ ಬಂದ ಲೈಬ್ರರಿ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿ, ಮೌಲ್ಯ ಹೆಚ್ಚಿಸಿದ ಅಧಿಕಾರಿ!

Mysore District Library: ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಅವರು 2023ನೇ ಸಾಲಿನ ಅತ್ಯುತ್ತಮ ಡಿಜಿಟಲ್ ಓದುಗರ ನೋಂದಣಿ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಆ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿ ಪರಮೇಶ್ ಅವರಿಗೆ ನೀಡುವಂತೆ ಮಂಜುನಾಥ್‌ ಅವರು ಸಾರ್ವಜನಿಕೆ ಗ್ರಂಥಾಲಯ ಇಲಾಖೆಗೆ ಪತ್ರ ಬರೆದು ಕೋರಿದರು.

ಅಪರೂಪ-ಅಮೂಲ್ಯ: ತಮಗೆ ಬಂದ ಲೈಬ್ರರಿ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿ, ಮೌಲ್ಯ ಹೆಚ್ಚಿಸಿದ ಅಧಿಕಾರಿ!
ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಮತ್ತು ಪರಮೇಶ್
ರಾಮ್​, ಮೈಸೂರು
| Edited By: |

Updated on: Aug 12, 2023 | 10:01 AM

Share

ಮೈಸೂರು, ಆಗಸ್ಟ್​ 12: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಮಗೆ ಒಲಿದು ಬಂದ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿಗೆ ನೀಡಿ, ಪ್ರಶಸ್ತಿಯ ಮೌಲ್ಯ ಮತ್ತು ಮಹತ್ವವನ್ನು ಹೆಚ್ಚಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಅಧಿಕಾರಿಯ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಈ ಅಪರೂಪದ ಪ್ರಕರಣ ನಡೆದಿದೆ. ಮೈಸೂರು (Mysore) ಜಿಲ್ಲಾ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ಬಿ ಮಂಜುನಾಥ್ ಅವರು ತಮಗೆ ಬಂದ ಪ್ರಶಸ್ತಿಯನ್ನು (Library Award) ಸಹೋದ್ಯೋಗಿಗೆ (Colleague) ನೀಡಿ, ಅವರ ಸೇವಾ ಕಾರ್ಯವನ್ನು ಗೌರವಿಸಿದ್ದಾರೆ.

ಲೈಬ್ರರಿ ಡೆಪ್ಯುಟಿ ಡೈರೆಕ್ಟರ್​​ ಬಿ ಮಂಜುನಾಥ್‌ ಅವರು 2023ನೇ ಸಾಲಿನ ಅತ್ಯುತ್ತಮ ಡಿಜಿಟಲ್ ಓದುಗರ ನೋಂದಣಿ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಆ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿ ಪರಮೇಶ್ ಅವರಿಗೆ ನೀಡುವಂತೆ ಮಂಜುನಾಥ್‌ ಅವರು ಸಾರ್ವಜನಿಕೆ ಗ್ರಂಥಾಲಯ ಇಲಾಖೆಗೆ ಪತ್ರ ಬರೆದು ಕೋರಿದರು. ಅಂದಹಾಗೆ ಪರಮೇಶ್ ಅವರು ಹೆಚ್ ಡಿ ಕೋಟೆ ಗ್ರಂಥಾಲಯ ಪ್ರಭಾರ ಅಧಿಕಾರಿಯಾಗಿದ್ದಾರೆ.

ಲೈಬ್ರರಿ ಪ್ರಶಸ್ತಿ ವರ್ಗಾಯಿಸಿಕೊಂಡ ಪರಮೇಶ್ ಅವರ ಸಾಧನೆ ಏನು ಗೊತ್ತಾ?

ಇನ್ನು, ಪರಮೇಶ್ ಅವರ ಸಾಧನೆಯೇನೆಂದರೆ ಒಟ್ಟು 23 ಲಕ್ಷ ನೋಂದಣಿಯಲ್ಲಿ 12 ಲಕ್ಷ ನೋಂದಣಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಮೇಶ್‌ ಅವರಿಗೆ ಪ್ರಶಸ್ತಿಯನ್ನು ವರ್ಗಾಯಿಸಲು ಹಿರಿಯ ಅಧಿಕಾರಿ ಮಂಜುನಾಥ್‌ ಕೋರಿದ್ದರು. ಬಿ ಮಂಜುನಾಥ್ ಅವರು 2015ರಲ್ಲಿಯೂ ಇದೇ ಪ್ರಶಸ್ತಿಗೆ ಭಾಜನರಾಗಿದ್ದರು ಎಂಬುದು ಗಮನಾರ್ಹ. ಮಂಜುನಾಥ್ ಅವರ ನಿರ್ಧಾರಕ್ಕೆ ಈಗ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?