AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆರೋಗ್ಯ ಕರ್ನಾಟಕ ಆಗಬೇಕೆಂಬುದು ಮುಖ್ಯಮಂತ್ರಿಗಳ ಕನಸು ಎಂದ ಡಾ.ಕೆ.ಸುಧಾಕರ್

ನಾಲ್ವಡಿ ನಾಯಕತ್ವದಲ್ಲಿಯೇ ಮೈಸೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗಿದ್ದು, ಇಡೀ ದೇಶದಲ್ಲಿಯೇ ಮೊದಲು ಆರಂಭವಾಗಿರುವ ಮೆಡಿಕಲ್​ ಕಾಲೇಜು ಇದಾಗಿದೆ ಎಂದು ಮೈಸೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​ ಹೇಳಿದ್ದಾರೆ.

ಮೈಸೂರು: ಆರೋಗ್ಯ ಕರ್ನಾಟಕ ಆಗಬೇಕೆಂಬುದು ಮುಖ್ಯಮಂತ್ರಿಗಳ ಕನಸು ಎಂದ ಡಾ.ಕೆ.ಸುಧಾಕರ್
ಕೆ. ಸುಧಾಕರ್​
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Nov 28, 2022 | 9:45 PM

Share

ಮೈಸೂರು: ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಬಹಳ ಮುಂದಿದ್ದು, ರಾಜ್ಯದ ಮೂಲೆ ಮೂಲೆಗೆ ಗುಣಮಟ್ಟದ ಚಿಕಿತ್ಸೆ ತಲುಪಿಸಲಾಗಿದೆ. ಆರೋಗ್ಯ ಕರ್ನಾಟಕ ಆಗಬೇಕೆಂಬುದು ಮುಖ್ಯಮಂತ್ರಿಗಳ ಕನಸು ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗ ತಡೆಯಲು 30 ವರ್ಷ ಮೇಲ್ಪಟ್ಟವರಿಗೆ ತಪಾಸಣೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿಯೂ ನಮ್ಮ ಕ್ಲಿನಿಕ್ ಹೆಸರಲ್ಲಿ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟವರಿಗೆ ಉಚಿತ ದೃಷ್ಟಿ ತಪಾಸಣೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಇನ್ನು ಆರೋಗ್ಯ ಕ್ಷೇತ್ರದಲ್ಲಿ ಮಕ್ಕಳಿಗೂ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಆರೋಗ್ಯವಾಗಿರಲು ವರ್ಷಕ್ಕೆ ಒಂದು ಬಾರಿಯಾದರೂ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ: ಮೈಸೂರು ನಗರ ಪೊಲೀಸ್ ಕಮಿಷನರ್

ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ ಎಂದು ಸಿಎಂ ಬೊಮ್ಮಾಯಿ ಸಲಹೆ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ನಮ್ಮ ರಾಜ್ಯದಲ್ಲಿ ಓದಿರುವ ವೈದ್ಯರು, ಖಾಸಗಿ ಆಸ್ಪತ್ರೆಗೆ ಹೋಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಮಗೆ ಸವಾಲಾಗಿರುವ ಕೆಲಸ ಸಿಗುತ್ತದೆ ಎಂದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಆದರೂ ಜ್ವರ ಬಂದರೆ ವೈದ್ಯರ ಬಳಿಗೆ ಬರಬೇಕು. ಪ್ರತಿಜ್ಞಾವಿಧಿಯಲ್ಲಿ ಬಡವರಿಗೆ ಸೇವೆ ಸಲ್ಲಿಸುವುದನ್ನು ಸೇರಿಸಿ, ಮನುಷ್ಯನಿಗೆ ಆರೋಗ್ಯ ಇಲ್ಲದಿದ್ದರೆ ಏನೂ ಪ್ರಯೋಜನ ಇಲ್ಲ. ಆರೋಗ್ಯ ಚೆನ್ನಾಗಿರಬೇಕಾದರೆ ಚಿಕಿತ್ಸೆ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ, ನನಗೆ ಚುನಾವಣೆ ಬಂದಾಗ ಒತ್ತಡವಾಗುತ್ತದೆ. ನಮಗೆ ಚುನಾವಣೆಯೇ ಒಂದು ರೀತಿ ಪರೀಕ್ಷೆ ಇದ್ದಂತೆ ಎಂದು ವಿದ್ಯಾರ್ಥಿಗಳಿಗೆ ಹಾಸ್ಯಾಸ್ಪದವಾಗಿ  ಹೇಳಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:45 pm, Mon, 28 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ