AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ

ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಲವು ಬದಲಾವಣೆಯೊಂದಿಗೆ ಈ ಬಾರಿಯ ದಸರಾ ಹಬ್ಬ ನಡೆಯಲಿದೆ ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ‘ದಸರಾ ಪ್ರಾಯೋಜಕರ ಜೊತೆ ಇಂದು ಸಭೆ ನಡೆಸಿದ್ದೇವೆ. ಕಳೆದ ಬಾರಿ ದಸರಾದಲ್ಲಿ 1ಕೋಟಿ 70 ಲಕ್ಷ ಪ್ರಾಯೋಜಕತ್ವ ಬಂದಿತ್ತು. ಹೆಚ್ಚಿನ ಪ್ರಾಯೋಜಕರು ಬಂದರೆ ಕಾರ್ಯಕ್ರಮ ಆಯೋಜನೆ ಸುಲಭ ಎಂದರು.

ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ
ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ ಬಿಡುಗಡೆ:
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 3:54 PM

ಮೈಸೂರು, ಸೆ.11: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾಗೆ ಕಾಡುಬಿಟ್ಟು ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಟೀಂ ಭರ್ಜರಿ ತಾಲೀಮು ಮಾಡುತ್ತಿವೆ. ಇದೀಗ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇನ್ನು ಪ್ರಾಯೋಜಕತ್ವದ ವಿವರ ಇಲ್ಲಿದೆ.

ಪ್ರಾಯೋಜಕತ್ವದ ವಿವರ

  • ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ನಿಗದಿ ಮಾಡಲಾಗಿದೆ. ಇದಕ್ಕಾಗಿ ಒಬ್ಬರಿಗೆ ಪ್ರಾಯೋಜಕತ್ವಕ್ಕೆ ಅವಕಾಶ ನೀಡಲಾಗಿದ್ದು, ಪ್ರಾಯೋಜಕರಿಗೆ ಜಂಬೂಸವಾರಿಯಲ್ಲಿ ಅರಮನೆಯ ಎಲ್ಲಾ ದ್ವಾರದಲ್ಲಿ ಜಾಹೀರಾತಿಗೆ ಅವಕಾಶ ಕಲ್ಪಿಸಲಾಗಿದೆ.
  • ಅಂಬಾರಿ‌ ಪ್ರಾಯೋಜಕತ್ವಕ್ಕೆ 1 ಕೋಟಿ ನಿಗದಿಯಾಗಿದ್ದು, ಮೂರು ಜನರಿಗೆ ಅವಕಾಶ ನೀಡಲಾಗಿದೆ. ಇವರಿಗೆ ಅರಮನೆ ಒಳಭಾಗದಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡಲಾಗಿದೆ.
  • ಪ್ಲಾಟಿನಂ ಪ್ರಾಯೋಜಕತ್ವಕ್ಕೆ 75 ಲಕ್ಷ‌ ನಿಗದಿಸಿದ್ದು, ಇಬ್ಬರಿಗೆ ಅವಕಾಶ ಕೊಡಲಾಗಿದೆ. ಆಹಾರ ಮೇಳ ಯುವ ಸಂಭ್ರಮದಲ್ಲಿ ಜಾಹೀರಾತಿಗೆ ಅವಕಾಶ.
  • ಗೋಲ್ಡನ್ ಪ್ರಾಯೋಜಕತ್ವಕ್ಕೆ 50 ಲಕ್ಷ ನಿಗದಿ, ಇಬ್ಬರಿಗೆ ಅವಕಾಶವಿದೆ. ಫಲಪುಷ್ಪ ಮೇಳ ದಸರಾ ಚಲನ ಚಿತ್ರೋತ್ಸವದಲ್ಲಿ ಜಾಹೀರಾತಿಗೆ ಅವಕಾಶ.
  • ಸಿಲ್ವರ್ ಪ್ರಾಯೋಜಕತ್ವಕ್ಕೆ 25 ಲಕ್ಷ. ನಾಲ್ಕು ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾ ದಸರಾ ನಂಜನಗೂಡು ದಸರಾ ಕುಸ್ತಿಯಲ್ಲಿ ಜಾಹೀರಾತಿಗೆ ಅವಕಾಶ.

ಇತರೆ ಪ್ರಾಯೋಜಕತ್ವಕ್ಕೆ 5 ರಿಂದ 15 ಲಕ್ಷ ನಿಗದಿ ಮಾಡಲಾಗಿದ್ದು, ದಸರೆಯ 6 ಕಡೆ ಜಾಹೀರಾತಿಗೆ ಅವಕಾಶ ನೀಡಲಾಗಿದೆ. ಇದನ್ನು ಹೊರತುಪಡಿಸಿ ಎಲ್​ಇಡಿ ಫ್ಲೆಕ್ಸ್ ಡಿಜಿಟಲ್ ಜಾಹೀರಾತಿಗೆ ಅವಕಾಶವಿದ್ದು, ಮೈಸೂರಿನ ಪ್ರಮುಖ‌ ವೃತ್ತ ರಸ್ತೆಗಳಲ್ಲಿ ಅವಕಾಶವಿದೆ. ಈ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ದೊರೆತಿದೆ.

ಇದನ್ನೂ ಓದಿ:ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ಈ ಕುರತು ಮಾತನಾಡಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ‘ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಲವು ಬದಲಾವಣೆಯೊಂದಿಗೆ ಈ ಬಾರಿಯ ದಸರಾ ಹಬ್ಬ ನಡೆಯಲಿದೆ. ದಸರಾ ಪ್ರಾಯೋಜಕರ ಜೊತೆ ಇಂದು ಸಭೆ ನಡೆಸಿದ್ದೇವೆ. ಕಳೆದ ಬಾರಿ ದಸರಾದಲ್ಲಿ 1ಕೋಟಿ 70 ಲಕ್ಷ ಪ್ರಾಯೋಜಕತ್ವ ಬಂದಿತ್ತು. ಹೆಚ್ಚಿನ ಪ್ರಾಯೋಜಕರು ಬಂದರೆ ಕಾರ್ಯಕ್ರಮ ಆಯೋಜನೆ ಸುಲಭ. ಈಗಾಗಲೇ ದಸರಾ ಕಾರ್ಯಕ್ರಮಗಳ ಪೂರ್ವ ಸಿದ್ಧತೆ ನಡೆಯುತ್ತಿವೆ ಎಂದು ಮೈಸೂರಿನಲ್ಲಿ ದಸರಾ ಕುರಿತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ