Sign In

By signing in or creating an account, you agree with Associated Broadcasting Company's Terms & Conditions and Privacy Policy.

Suttur Jatra Mahotsava 2023: ಜ.18 ರಿಂದ 23ರವರೆಗೆ 6 ದಿನಗಳ ಕಾಲ ಸುಕ್ಷೇತ್ರ ಸುತ್ತೂರು ಜಾತ್ರೆ

ಸುತ್ತೂರು ಜಾತ್ರೆ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುಕ್ಷೇತ್ರ ಸುತ್ತೂರು ಜಾತ್ರೆ ಜನವರಿ.18 ರಿಂದ 6 ದಿನಗಳ ಕಾಲ ನಡೆಯಲಿದೆ.

Suttur Jatra Mahotsava 2023: ಜ.18 ರಿಂದ 23ರವರೆಗೆ 6 ದಿನಗಳ ಕಾಲ ಸುಕ್ಷೇತ್ರ ಸುತ್ತೂರು ಜಾತ್ರೆ
ಸುತ್ತೂರು ಜಾತ್ರೆImage Credit source: Deccan Herald
Follow us
TV9 Web
| Updated By: Digi Tech Desk

Updated on:Jan 17, 2023 | 9:08 AM

ಮೈಸೂರು: ನಾಡಿನ ಪ್ರಸಿದ್ಧ ಯಾತ್ರೆಗಳಲ್ಲಿ ಒಂದಾದ ಮೈಸೂರು (Mysore) ಜಿಲ್ಲೆಯ ನಂಜನಗೂಡು (Nanjangudu) ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುಕ್ಷೇತ್ರ ಸುತ್ತೂರು ಜಾತ್ರೆ (Sattur Fair) ನಾಳೆ (ಜನವರಿ.18) ರಿಂದ 6 ದಿನಗಳ ಕಾಲ ನಡೆಯಲಿದೆ. ಕೊರೊನಾ (Covid) ಕಾರಣದಿಂದ 2 ವರ್ಷ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು. ಆದರೆ ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಜ.18 ರಿಂದ 23ರವರೆಗೆ 6 ದಿನಗಳ ಕಾಲ ಜಾತ್ರೆ ನಡೆಯಲಿದೆ. ಇನ್ನು ವೈಭವದ ಜಾತ್ರೆಗಾಗಿ ಸಕಲ ಸಿದ್ಧತೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರಿಗೆ ದಾಸೋಹವಿರಲಿದೆ.

ಈ ಜಾತ್ರೆಯ ವಿಶೇಷತೆಗಳೆಂದರೇ ಕೃಷಿ ಮೇಳ, ಸಾಂಸ್ಕೃತಿಕ ಮೇಳ, ವಸ್ತು ಪ್ರದರ್ಶನ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ. ಹಾಗೇ ಸಾಮೂಹಿಕ ವಿವಾಹ, ಹಾಲರವಿ ಉತ್ಸವ, ರಥೋತ್ಸವ, ಮಹದೇಶ್ವರ ಕೊಂಡೋತ್ಸವ, ಲಕ್ಷದೀಪೋತ್ಸವ, ಶ್ರೀವೀರಭದ್ರೇಶ್ವರ ಕೊಂಡೋತ್ಸವ, ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ನಡೆಯಲಿವೆ.

ಇದನ್ನೂ ಓದಿ: ಸರ್ವಧರ್ಮ ಸಮನ್ವಯದ ಸಂಕ್ರಾಂತಿ ಆಚರಣೆ; ಹಾಲಕೆರೆ ಮಠದ ಆನಂದಾಶ್ರಮದಲ್ಲಿ ಇಸ್ಲಾಂ ಧರ್ಮದವರಿಂದ ದಾಸೋಹ

ಈ ಜಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್​.ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Tue, 17 January 23

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್