AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​
ಸಚಿವ ಹೆಚ್​ ಸಿ ಮಹದೇವಪ್ಪ
ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on: Nov 30, 2023 | 1:47 PM

Share

ಬೆಂಗಳೂರು ನ.30: ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ (Foetus Gender Detection, Murder Case) ನಡೆದಿರುವುದು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಮೈಸೂರು (Mysore) ಜಿಲ್ಲೆಯಲ್ಲಿ ನಡೆದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದು ಆರು ದಿನಗಳು ಕಳೆದಿವೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​. ಸಿ.ಮಹದೇವಪ್ಪ (HC Mahadevappa)  ಇದುವರೆಗೂ ತುಟಿಪಿಟಕ ಅಂದಿಲ್ಲ. ಘಟನೆ ಬಗ್ಗೆ ಒಂದು ಸಭೆ ಕೂಡ ನಡೆಸಿಲ್ಲ. ಸಚಿವರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಸಿಬಿಐ ತನಿಖೆ ನಡೆಸುವಂತೆ ಸಿಎಂಗೆ ಮನವಿ: ಚಲುವರಾಯಸ್ವಾಮಿ

ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ನಡೆದಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮೂರು ತಿಂಗಳ ಹಿಂದೆಯೇ ಆಸ್ಪತ್ರೆ ಕ್ಲೋಸ್

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ