AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​
ಸಚಿವ ಹೆಚ್​ ಸಿ ಮಹದೇವಪ್ಪ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 30, 2023 | 1:47 PM

Share

ಬೆಂಗಳೂರು ನ.30: ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ (Foetus Gender Detection, Murder Case) ನಡೆದಿರುವುದು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಮೈಸೂರು (Mysore) ಜಿಲ್ಲೆಯಲ್ಲಿ ನಡೆದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದು ಆರು ದಿನಗಳು ಕಳೆದಿವೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​. ಸಿ.ಮಹದೇವಪ್ಪ (HC Mahadevappa)  ಇದುವರೆಗೂ ತುಟಿಪಿಟಕ ಅಂದಿಲ್ಲ. ಘಟನೆ ಬಗ್ಗೆ ಒಂದು ಸಭೆ ಕೂಡ ನಡೆಸಿಲ್ಲ. ಸಚಿವರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಸಿಬಿಐ ತನಿಖೆ ನಡೆಸುವಂತೆ ಸಿಎಂಗೆ ಮನವಿ: ಚಲುವರಾಯಸ್ವಾಮಿ

ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ನಡೆದಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮೂರು ತಿಂಗಳ ಹಿಂದೆಯೇ ಆಸ್ಪತ್ರೆ ಕ್ಲೋಸ್

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ