Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲೇ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಐದನೇ ಸ್ಥಾನ; ಪ್ರಶಸ್ತಿ ಸ್ವೀಕರಿಸಿದ ಸಚಿವ ಭೈರತಿ ಬಸವರಾಜ್

ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ವೀಕಾರ ಮಾಡಿದ್ದಾರೆ. ಕಳೆದ ವರ್ಷ ಘೋಷಣೆಯಗಿದ್ದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿತ್ತು.

ದೇಶದಲ್ಲೇ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಐದನೇ ಸ್ಥಾನ; ಪ್ರಶಸ್ತಿ ಸ್ವೀಕರಿಸಿದ ಸಚಿವ ಭೈರತಿ ಬಸವರಾಜ್
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Nov 20, 2021 | 10:28 PM

ದೆಹಲಿ: ಭಾರತ ದೇಶದಲ್ಲೇ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿದೆ. ಕರ್ನಾಟಕದ 4 ನಗರ ಪಾಲಿಕೆಗಳಿಗೆ ಸ್ವಚ್ಛ ನಗರ ಪುರಸ್ಕಾರ ಲಭಿಸಿದೆ. ಮೈಸೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಮಹಾನಗರ ಪಾಲಿಕೆಗಳಿಗೆ ಸ್ವಚ್ಛನಗರ ಪುರಸ್ಕಾರ ದೊರಕಿದೆ. ಸಚಿವ ಭೈರತಿ ಬಸವರಾಜ್ ಸ್ವಚ್ಛ ನಗರಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ವೀಕಾರ ಮಾಡಿದ್ದಾರೆ. ಕಳೆದ ವರ್ಷ ಘೋಷಣೆಯಗಿದ್ದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿತ್ತು.

ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಕೂಡ ಆಯ್ಕೆ ಆಗಿದೆ. ಸಫಾಯಿ ಮಿತ್ರ ಸುರಕ್ಷಾ ಚಾಲೆಂಜ್ ಮತ್ತು ಕಸ ಮುಕ್ತ ನಗರಗಳ ಅಡಿಯಲ್ಲಿ ಅರ್ಜಿಗಳನ್ನು ಈ ಹಿಂದೆ ಆಹ್ವಾನಿಸಿತ್ತು. ಆ ಪ್ರಕಾರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ನೀಡುತ್ತಿದ್ದು, ಇದರಲ್ಲಿ ಬೆಂಗಳೂರು ಆಯ್ಕೆಯಾಗಿದೆ. ಈ ಪ್ರಶಸ್ತಿಗೆ ರಾಜ್ಯದ ಒಟ್ಟು 9 ನಗರಗಳು ಸ್ವಚ್ಛ ನಗರಗಳೆಂದು ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ಮುಧೋಳ ನಗರಕ್ಕೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ ಲಭಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಪ್ರಶಸ್ತಿ ಲಭ್ಯವಾಗಿದೆ. ಕೇಂದ್ರ ಸರ್ಕಾರ ನೀಡುವ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ ನೀಡಲಾಗಿದೆ. ಮುಧೋಳ ನಗರಸಭೆ ಆಯುಕ್ತ ಶಿವಾನಂದ ಅಂಬಿಗೇರ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಮೂವರು ವಲಯ ಜಂಟಿ ಆಯುಕ್ತರ ವರ್ಗಾವಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ, ಯಲಹಂಕ ವಲಯ ಜಂಟಿ ಆಯುಕ್ತ ಡಾ.ಡಿ. ಆರ್​​ ಅಶೋಕ್, ಪೂರ್ವ ವಲಯ ಜಂಟಿ ಆಯುಕ್ತೆ ಕೆ.ಆರ್​​. ಪಲ್ಲವಿ, ದಕ್ಷಿಣ ವಲಯ ಜಂಟಿ‌ ಆಯುಕ್ತ ವೀರಭದ್ರಸ್ವಾಮಿ ವರ್ಗಾವಣೆ ಮಾಡಲಾಗಿದೆ.

ಕೆ.ಆರ್​​. ಪಲ್ಲವಿ, ವೀರಭದ್ರಸ್ವಾಮಿ ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ. ಪೌರಾಡಳಿತ ಇಲಾಖೆಗೆ ಕೆ.ಆರ್​​. ಪಲ್ಲವಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವೀರಭದ್ರಸ್ವಾಮಿ ವಾಪಸ್ ಆಗಿದ್ದಾರೆ. ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ಆರ್. ಶಿಲ್ಪಾ, ಯಲಹಂಕ ವಲಯ ಜಂಟಿ ಆಯುಕ್ತರಾಗಿ ಪಿ.ವಿ. ಪೂರ್ಣಿಮಾ, ದಕ್ಷಿಣ ವಲಯ ಜಂಟಿ ಆಯುಕ್ತರಾಗಿ ಡಾ. ಜಗದೀಶ್ ನಾಯಕ್ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶರ್ಮಾಗೆ ಮೈಸೂರು ಜೋಡಿಯಿಂದ ಕನ್ನಡದಲ್ಲೇ ಮದುವೆ ಕರೆಯೋಲೆ; ಸಂತಸ ಪಟ್ಟ ನಟಿ

ಇದನ್ನೂ ಓದಿ: ಮೈಸೂರು: ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರಿಸಲು ಸಹಿ ಸಂಗ್ರಹ; ಸಿಎಂಗೆ ಪತ್ರ ಬರೆದ ಅಭಿಮಾನಿ

Published On - 3:55 pm, Sat, 20 November 21