AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ

HD Kote municipal office: ಕೆಲಸಕ್ಕೆ ಗೈರು ಹಾಜರಾಗಿದ್ದರೂ ಹೆಚ್.ಡಿ. ಕೋಟೆ ಪುರಸಭೆಯ ಸಂಘಟನಾಧಿಕಾರಿಗೆ ವೇತನ ಪಾವತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದುಗೆ ಪುರಸಭೆ ಸದಸ್ಯರಿಂದ ದೂರು ನೀಡಲಾಗಿದೆ. ಪುರಸಭೆಯ ಸಂಘಟನಾಧಿಕಾರಿ ಉಮಾಶಂಕರ್ ವಿರುದ್ಧ ದೂರು ಕೇಳಿಬಂದಿದ್ದು, ಮೂರು ವರ್ಷಗಳ ಕಾಲ ಕರ್ತವ್ಯಕ್ಕೆ ಹಾಜರಾಗದ ಈ ಅಧಿಕಾರಿ ಪ್ರತಿ ತಿಂಗಳು 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ
ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ
TV9 Web
| Edited By: |

Updated on: Jul 21, 2021 | 1:13 PM

Share

ಮೈಸೂರು: ಮೂರು ವರ್ಷಗಳ ಸುದೀರ್ಘ ಅವಧಿಗೆ ಕೆಲಸಕ್ಕೇ ಬಾರದೆ ಅಧಿಕಾರಿಯೊಬ್ಬ ವೇತನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ಪುರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸಾಮಾನ್ಯ ಸಭೆಯಲ್ಲಿ ಈ ಅಕ್ರಮ ಬಟಾಬಯಲಾಗಿದೆ. ಪುರಸಭೆ ಸಂಘಟನಾಧಿಕಾರಿ ಉಮಾಶಂಕರ್ ವಿರುದ್ಧ ಈ ದೂರು ಕೇಳಿಬಂದಿದ್ದು, ಈತ ಆಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಕೆಲಸಕ್ಕೆ ಗೈರು ಹಾಜರಾಗಿದ್ದರೂ ಹೆಚ್.ಡಿ. ಕೋಟೆ ಪುರಸಭೆಯ ಸಂಘಟನಾಧಿಕಾರಿಗೆ ವೇತನ ಪಾವತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದುಗೆ ಪುರಸಭೆ ಸದಸ್ಯರಿಂದ ದೂರು ನೀಡಲಾಗಿದೆ. ಪುರಸಭೆಯ ಸಂಘಟನಾಧಿಕಾರಿ ಎಸ್​. ಉಮಾಶಂಕರ್ ವಿರುದ್ಧ ದೂರು ಕೇಳಿಬಂದಿದ್ದು, ಮೂರು ವರ್ಷಗಳ ಕಾಲ ಕರ್ತವ್ಯಕ್ಕೆ ಹಾಜರಾಗದ ಈ ಅಧಿಕಾರಿ ಪ್ರತಿ ತಿಂಗಳು 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ದಾಖಲಾತಿ ತಿದ್ದುಪಡಿ ಮಾಡಿ ಹಿರಿಯ ಅಧಿಕಾರಿಯಿಂದ ತಮ್ಮ ಖಾತೆಗೆ ವೇತನ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ವೇತನ ಪಡೆದ ಉಮಾಶಂಕರ್ ವಿರುದ್ಧ ಕ್ರಮಕ್ಕೆ ಆಗ್ರಹ:

Mysore HD Kote municipal officer umashankar absent from duty for 3 years but given salary monthly 2

ಅಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ ವರ್ಷಗಟ್ಟಲೆ ಲಕ್ಷಾಂತರ ರೂಪಾಯಿ ವೇತನ ಪಡೆದ ಉಮಾಶಂಕರ್

ಅಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ ವರ್ಷಗಟ್ಟಲೆ ಲಕ್ಷಾಂತರ ರೂಪಾಯಿ ವೇತನ ಪಡೆದ ಉಮಾಶಂಕರ್ ವಿರುದ್ಧ ತನಿಖೆ ನಡೆಸಿ, ಸಂಪೂರ್ಣ ವರದಿ ನೀಡಲು ಶಾಸಕ ಚಿಕ್ಕಮಾದು ಮೇಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಹಿಂದೆ ಇದ್ದ ಪುರಸಭೆ ಮುಖ್ಯಾಧಿಕಾರಿ ವೇತನ ಮಂಜೂರು ಮಾಡಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದ್ದು, ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ನೂತನ ಮುಖ್ಯಾಧಿಕಾರಿ ಹೆಗಲಿಗೆ ಹಗರಣದ ತನಿಖೆ ಜವಾಬ್ದಾರಿ ವಹಿಸಲಾಗಿದೆ.

ನಾನು 5 ಲಕ್ಷ ರೂ.ಸಂಬಳದಲ್ಲಿ ಪ್ರತಿ ತಿಂಗಳು 2.75 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ; ದೇಶದ ಅಭಿವೃದ್ಧಿಗಾಗಿ ತೆರಿಗೆ ಕಟ್ಟಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

(Mysore HD Kote municipal officer umashankar absent from duty for 3 years but given salary monthly)

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ