ಮೈಸೂರು: ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಆತ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದನು.ಆರಂಭದಲ್ಲಿ ಚೆನ್ನಾಗಿದ್ದ ವ್ಯವಹಾರ ನಂತರ ನಷ್ಟದಲ್ಲಿ ಸಾಗಿದೆ. ಇದರಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದನು. ಸಾಲ ತೀರಿಸಲು ಆಸ್ತಿ ಮಾರಲು ಮುಂದಾಗಿದ್ದನು. ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಕೊಚ್ಚಿ ಕೊಂದ ಪತಿ
ಕೊಲೆಯಾದ ಗಾಯತ್ರಿ, ಆರೋಪಿ ಪಾಪಣ್ಣ
Edited By: ವಿವೇಕ ಬಿರಾದಾರ

Updated on: Aug 18, 2025 | 7:41 PM

ಮೈಸೂರು, ಆಗಸ್ಟ್​ 18: ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ (Mysore) ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲು ಮಹದೇಶ್ವರ ಬಡಾವಣೆಯಲ್ಲಿ ಘಟನೆ ನಡೆದಿದ್ದು 54 ವರ್ಷದ ಗಾಯತ್ರಿ ಕೊಲೆಯಾಗಿದ್ದಾರೆ. 64 ವರ್ಷದ ಪಾಪಣ್ಣ ಕೊಲೆ ಮಾಡಿದ ಆರೋಪಿ. ಆರೋಪಿ ಪಾಪಣ್ಣ ರಿಯಲ್ ಎಸ್ಟೇಟ್ ಉದ್ಯಮ ಮಾಡಲು ಹೋಗಿ, ನಷ್ಟ ಅನುಭವಿಸಿ, ಸಾಲ ಮಾಡಿಕೊಂಡಿದ್ದನು. ಜೊತೆಗೆ ಪಾಪಣ್ಣ ಮದ್ಯವ್ಯಸನಿಯಾಗಿದ್ದರು. ಕೈಯಲ್ಲಿ ಹಣ ಓಡಾಡುತ್ತಿದ್ದಾಗ ಎಲ್ಲ ಚೆನ್ನಾಗಿಯೇ ಇತ್ತು. ಆದರೆ, ಲಾಸ್ ಆದ ಮೇಲೆ ಹಣಕ್ಕೆ ಪರದಾಟ ಶುರವಾಗಿತ್ತು. ಇದಕ್ಕಾಗಿ ತನ್ನ ಆಸ್ತಿ ಮಾರಲು ಪಾಪಣ್ಣ ಮುಂದಾಗಿದ್ದನು. ಆದರೆ, ಪತ್ನಿ ಗಾಯತ್ರಿ ಆಸ್ತಿ ಮಾರಾಟಕ್ಕೆ ಒಪ್ಪಿರಲಿಲ್ಲ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ.

ಈ ವೇಳೆ ಗಾಯತ್ರಿ ದೋಸೆ ತವಾದಿಂದ ಪತಿಗೆ ಹೊಡೆದಿದ್ದಾರೆ. ಇದರಿಂದ ಕೆರಳಿದ ಪಾಪಣ್ಣ, ಮಚ್ಚಿನಿಂದ ಆಕೆ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿ ಪಾಪಣ್ಣನನ್ನು ಬಂಧಿಸಿರುವ ವಿಜಯನಗರ ಠಾಣೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಅಪರಿಚಿತ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜೇವರ್ಗಿ ಕಾಲೋನಿಯ ರೈಲ್ವೆ ಸೇತುವೆ ಬಳಿ ನಡೆದಿದೆ. ಸುಮಾರು 35 ರಿಂದ 40 ವರ್ಷದ ವ್ಯಕ್ತಿಯನ್ನು ಆರೋಪಿಗಳು ಕೊಂದಿದ್ದಾರೆ. ರೈಲ್ವೆ ಅಂಡರ್‌ ಬ್ರಿಡ್ಜ್ ಬಳಿ ವ್ಯಕ್ತಿಯನ್ನು ಕರೆತಂದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ ಆರೋಪ: ಮಾಜಿ ಶಾಸಕ ಪೊಲೀಸರ ವಶಕ್ಕೆ

ತಮ್ಮನಿಂದಲೇ ಅಣ್ಣನ ಕೊಲೆ

ಕೋಲಾರ: ಜಮೀನು ವಿವಾದ ಹಿನ್ನೆಲೆಯಲ್ಲಿ ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಂಗಾರಪೇಟೆ ತಾಲೂಕಿನ ರಾಮಾಪುರದಲ್ಲಿ ನಡೆದಿದೆ. ವೆಂಕಟಾಚಲಪತಿ (50) ಕೊಲೆಯಾದ ವ್ಯಕ್ತಿ. ಮುನಿರಾಜು (39) ಕೊಲೆ ಮಾಡಿದ ಆರೋಪಿ. ಆಸ್ತಿ ಪಾಲು ಮಾಡಿಕೊಳ್ಳುವ ವಿಚಾರದಲ್ಲಿ ಸೋದರರ ನಡುವೆ ಜಗಳ ಶುರುವಾಗಿದೆ.

ಗಲಾಟೆ ತಾರಕಕ್ಕೇರಿ ಚಾಕುವಿನಿಂದ ಇರಿದು ಅಣ್ಣ ವೆಂಕಟಾಚಲಪತಿಯನ್ನು ತಮ್ಮ ಮುನಿರಾಜು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಕೆಜಿಎಫ್ ಎಸ್​​ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುನಿರಾಜುನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Mon, 18 August 25

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us