AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಿ: ಮೈಸೂರು ಜಿಲ್ಲಾಧಿಕಾರಿ ಆದೇಶ

ಟಿ ನರಸೀಪುರ ತಾಲ್ಲೂಕಿನಲ್ಲಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಿ ಎಂದು ಮೈಸೂರು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಟಿ ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಈ ಆದೇಶ ಹೊರಬಿದ್ದಿದೆ.

ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಿ: ಮೈಸೂರು ಜಿಲ್ಲಾಧಿಕಾರಿ ಆದೇಶ
ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಿ: ಮೈಸೂರು ಜಿಲ್ಲಾಧಿಕಾರಿ ಆದೇಶ
TV9 Web
| Edited By: Rakesh Nayak Manchi|

Updated on: Dec 06, 2022 | 9:58 AM

Share

ಮೈಸೂರು: ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿ (Leopard attack)ಗೆ ಇಬ್ಬರು ಬಲಿ ಹಿನ್ನೆಲೆ ತಾಲ್ಲೂಕಿನಲ್ಲಿ ನಿಗದಿತ ಸಮಯಕ್ಕೆ ಕಬ್ಬು ಕಟಾವು (Sugarcane harvest) ಮಾಡಿ ಸಾಗಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ (Dr.K.V.Rajendra) ಅವರು ಆದೇಶ ಹೊರಡಿಸಿದ್ದಾರೆ. ಜನರಿಗೆ ತೊಂದರೆ ಕೊಡುತ್ತಿರುವ ಹಾಗೂ ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಈ ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿರುವುದರಿಂದ ಚಿರತೆ ಸೆರೆ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಹೀಗಾಗಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಬೇಕು. ಇದರಿಂದಾಗಿ ಚಿರತೆ ಪತ್ತೆ ಹಚ್ಚಿ ಸೆರೆ ಹಿಡಿಯಲು ಸಾಧ್ಯವಾಗಲಿದೆ ಎಂದು ಆದೇಶದಲ್ಲಿ ಮನವಿ ಮಾಡಲಾಗಿದೆ.

ಹುಣಸೂರಿಗೆ ಮೈಸೂರು ಡಿಸಿ ರಾಜೇಂದ್ರ, ಎಸ್​ಪಿ ಚೇತನ್ ಭೇಟಿ

ನಾಳೆ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಮೈಸೂರು ಡಿಸಿ ರಾಜೇಂದ್ರ, ಎಸ್​ಪಿ ಚೇತನ್ ಅವರು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಜೊತೆ ಹಾಗೂ ಎಲ್ಲಾ ಸಮುದಾಯಗಳ ಮುಖಂಡರೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ. ಅಲ್ಲದೆ ನಾಲ್ಕು ವರ್ಷದ ಹಿಂದೆ ವಿವಾದ ಸೃಷ್ಟಿಯಾಗಿದ್ದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ​ ಕೈಗೊಳ್ಳಲಾಗಿದೆ. ಎಸ್​ಪಿ ಆರ್​.ಚೇತನ್ ಅವರು ಹುಣಸೂರಿನಲ್ಲೇ ನಿಂತು ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಪ್ರಮುಖ ನಾಯಕರುಗಳು ಭಾಗಿ ಸಾಧ್ಯತೆ ಇದೆ.

ಕಾಡಿನಿಂದ ನಾಡಿಗೆ ಬಂದ ಆನೆಗಳಿಂದ ಬೆಳೆ‌ ನಾಶ

ಮೈಸೂರಿನಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದ್ದು, ಕಾಡಿನಿಂದ ನಾಡಿಗೆ ಬಂದ ಆನೆಗಳಿಂದ ಬೆಳೆ‌ ನಾಶಗೊಳಿಸಿದೆ. ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು ರೈತರು ಕಷ್ಟುಪಟ್ಟು ಬೆಳೆದ ಬೆಳೆಗಳನ್ನು ತುಳಿದು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳ ಹಿಂಡು ಬರುತ್ತಿದ್ದು, ಕಾಡು ಪ್ರಾಣಿ ಕಾಡಿನಿಂದ ನಾಡಿಗೆ ಬಾರದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ