AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ನರಸೀಪುರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿದ ಚಿರತೆ

ಟಿ ನರಸೀಪುರದಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ನಡುವೆಯೂ ಕಳ್ಳ ಚಿರತೆ ಸಿಬ್ಬಂದಿ ಕಣ್ಣು ತಪ್ಪಿಸಿ ಬಂದು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಹೋಗಿದೆ.

ಟಿ.ನರಸೀಪುರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿದ ಚಿರತೆ
ಟಿ.ನರಸೀಪುರದಲ್ಲಿ ಮತ್ತೆ ಚಿರತೆ ದಾಳಿImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 3:36 PM

Share

ಮೈಸೂರು: ಟಿ.ನರಸೀಪುರ (T. Narasipur) ತಾಲೂಕಿನ ಜನರ ನಿದ್ದೆಗೆಡಿಸಿರುವ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಕಣ್ಣಿಗೂ ಬೀಳದೆ ತಪ್ಪಿಸಿಕೊಳ್ಳುತ್ತಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ತಂಡ ಹರಸಾಹಸ ಪಡುತ್ತಿದೆ. ಈ ನಡುವೆ ಸಿಬ್ಬಂದಿ ಕಣ್ಣು ತಪ್ಪಿಸಿಕೊಂಡು ಬಂದ ಚಿರತೆ ಕುರಿ, ಮೇಕೆ ಮೇಲೆ ದಾಳಿ (Leopard attack) ನಡೆಸಿದ ಘಟನೆ ಟಿ.ನರಸೀಪುರ ತಾಲೂಕಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡುವೆಯೂ ಚಿರತೆ ದಾಳಿ ನಡೆದಿರುವುದರಿಂದ ಜನರಲ್ಲಿನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಈ ತಾಲೂಕಿನಲ್ಲಿ ಓರ್ವ ಯುವಕನನ್ನು ಬಲಿ ಪಡೆದಿದ್ದ ಚಿರತೆ ದಾಳಿಗೆ ಮೇಘನಾ ಸಾವನ್ನಪ್ಪಿದ್ದಳು. ಒಂದೇ ತಿಂಗಳಲ್ಲಿ ಚಿರತೆಯು ಎರಡು ನರಬಲಿ ಪಡೆದ ಹಿನ್ನೆಲೆ ಜನರಲ್ಲಿ ಆತಂಕ ಮನೆಮಾಡಿತ್ತು.

ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆಯ ಕೊನೆಯುಸಿರೆಳೆದಿದ್ದಳು.

ಇದನ್ನೂ ಓದಿ: ಕೋಟೆನಾಡು ಚಿತ್ರದುರ್ಗದಲ್ಲಿ ಚಿರತೆ ಭೀತಿ: ಮನೆಯಿಂದ ಹೊರಬರಲು ಭಯ ಪಡುತ್ತಿರುವ ಜನರು

ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಕಳೆದ ತಿಂಗಳಷ್ಟೇ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದೀಗ ಮೇಘನಾಳನ್ನ ಬಲಿಪಡೆದುಕೊಂಡಿದೆ. ಒಂದು ತಿಂಗಳಲ್ಲೇ ಚಿರತೆ ದಾಳಿಗೆ 2ನೇ ಬಲಿಯಾಗಿರುವುದರಿಂದ ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಭಯ ಶುರುವಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಹೀಗಾಗಿ ಚಿರತೆಯನ್ನು ಆದಷ್ಟು ಬೇಗ ಸೆರೆಹಿಡಿಯುವಂತೆ ಜನರು ಆಗ್ರಹಿಸಿದ್ದಾರೆ.

ಎರಡು ಬಲಿ ಪಡೆದ ನಂತರ ಎಚ್ಚೆತ್ತ ಅರಣ್ಯ ಇಲಾಖೆ, ತಾಲೂಕಿನಲ್ಲಿ ಚಿರತೆ ಹಿಡಿಯಲು ಬೋನು ಇರಿಸಿದ್ದಾರೆ. ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಆರಂಭಿಸಿದ ವಿಶೇಷ ಕಾರ್ಯಾಚರಣೆ ಫಲ ನೀಡದ ಹಿನ್ನೆಲೆ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿ ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾ ಮತ್ತು ಡ್ರೋನ್‌ ಮೂಲಕ ಕಾರ್ಯಾಚರಣೆಗೆ ಇಳಿದರು. ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಈ ರೀತಿಯ ಕ್ಯಾಮೆರಾವನ್ನು ಪ್ರಾಯೋಗಿಕವಾಗಿ ಬಳಸುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 12 December 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ