AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹೇಗಿದೆ ಪರಿಸ್ಥಿತಿ?

ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್​ಗೆ ಮಂಗಳವಾರ ಬೆಳಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರು ಹಾಗೂ ಮಂಡ್ಯದಲ್ಲಿ ಬಸ್​ಗಳ ಸಂಚಾರ ಎಂದಿನಂತೆಯೇ ನಡೆಯುತ್ತಿದ್ದು, ವ್ಯಾಪಾರ ವಹಿವಾಟು ಸಹ ಆರಂಭಗೊಂಡಿವೆ.

ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹೇಗಿದೆ ಪರಿಸ್ಥಿತಿ?
ಮೈಸೂರಿನಲ್ಲಿ ಜನಜೀವನ ಎಂದಿನಂತೆಯೇ ಆರಂಭವಾಗಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನೂ ಕಲ್ಪಿಸಲಾಗಿದೆ.
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jan 07, 2025 | 7:58 AM

ಮೈಸೂರು, ಜನವರಿ 7: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಮೈಸೂರು ಹಾಗೂ ಮಂಡ್ಯ ಬಂದ್​​ಗೆ ಕರೆ ನೀಡಿವೆ. ಆದರೆ, ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ ಸ್ಥಿತಿ ಇದೆ. ಅದೇ ರೀತಿ, ಮೈಸೂರಿನಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಎಂದಿನಂತೆಯೇ ಬಸ್‌ಗಳು ತೆರಳುತ್ತಿವೆ.

ಮುಂಜಾಗ್ರತಾ ಕ್ರಮವಾಗಿ ಮೈಸೂರು ಬಸ್ ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಿಆರ್ ವ್ಯಾನ್, ಗಸ್ತು ವಾಹನ, ಕಮಾಂಡೋ ವಾಹನ ನಿಯೋಜನೆ ಮಾಡಲಾಗಿದೆ.

ಮಂಡ್ಯದಲ್ಲಿಯೂ ಸಹಜ ಸ್ಥಿತಿ

ಮಂಡ್ಯದಲ್ಲಿ ಕೂಡ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ನಡೆಯುತ್ತಿದೆ. ಸಾರಿಗೆ ಬಸ್​​ಗಳು ಮಂಡ್ಯದಿಂದ ಬೇರೆಡೆಗೆ ತೆರಳುತ್ತಿವೆ. ವ್ಯಾಪಾರ ವಹಿವಾಟು ಕೂಡ ಎಂದಿನಂತೆಯೇ ಆರಂಭವಾಗುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇನ್ನೂ ಬಂದ್ ಬಿಸಿ ಆರಂಭವಾಗಿಲ್ಲ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್​​ಗೆ ಕರೆ ನೀಡಲಾಗಿದೆ. ದಲಿತ,‌ ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದಿಂದ ಬಂದ್​​ಗೆ ಕರೆ ನೀಡಲಾಗಿದೆ. ಬಂದ್ ಬೆಂಬಲಿಸುವಂತೆ‌ ವರ್ತಕರು, ಹೋಟೆಲ್ ಮಾಲೀಕರು, ಬೀದಿ ಬದಿವ್ಯಾಪಾರಿಗಳಿಗೆ, ಆಟೋ ಚಾಲಕರಿಗೆ ಮನವಿ ಮಾಡಲಾಗಿತ್ತು. ಬಂದ್ ಜೊತೆಗೆ ಪ್ರತಿಭಟನೆಗೂ ನಿರ್ಧಾರ ಕೈಗೊಳ್ಳಲಾಗಿತ್ತು.

ರಸ್ತೆಯಲ್ಲಿ ಒಣಗಿ ಹಾಕಿದ್ದ ಹುರುಳಿಯಿಂದ ಕಾರಿಗೆ ಬೆಂಕಿ

ರಸ್ತೆಯಲ್ಲಿ ಒಣಗಿ ಹಾಕಿದ್ದ ಹುರುಳಿಯಿಂದ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕು ಎತ್ತಿಗೆ ಗೇಟ್ ಬಾಲನ ಕಟ್ಟೆ ಬಳಿ ಸಂಭವಿಸಿದೆ. ಇತ್ತೀಚೆಗೆ ರೈತರು ರಸ್ತೆ ತುಂಬಾ ಹುರುಳಿ ಒಣಗಲು ಹಾಕುತ್ತಿದ್ದಾರೆ. ಈ‌ ಬಗ್ಗೆ ಕೆಲ ದಿನಗಳ ಹಿಂದೆ ‘ಟಿವಿ9’ ವರದಿ ಮಾಡಿದ್ದರ ಜತೆಗೆ, ಅಪಾಯದ ಸಂಭಾವ್ಯತೆ ಬಗ್ಗೆ ಗಮನ ಸೆಳೆದಿತ್ತು.

ಇದನ್ನೂ ಓದಿ: ಸುಮಲತಾ ಬಳಸುತ್ತಿದ್ದ ಕಾರು ನಿರಾಕರಿಸಿದರೇ ಕುಮಾರಸ್ವಾಮಿ? ಚಲುವರಾಯಸ್ವಾಮಿ ಹೊಸ ಆರೋಪ

ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದರಿಂದ ಸಾವು-ನೋವು ತಪ್ಪಿದೆ. ರಸ್ತೆ ಹುರುಳಿ ಒಣ ಹಾಕುವುದರಿಂದ ಆಗಬಹುದಾದ ಅಪಾಯಗಳ ಬಗ್ಗೆ ದೂರು ನೀಡಿದರೂ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ