Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮುಡಾದ 160 ನಿವೇಶನ​​ಗಳನ್ನು ಜಪ್ತಿಗೆ ಇಡಿ ಆದೇಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 160 ನಿವೇಶನಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರದ ಶಂಕೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರವಿ, ಅಬ್ದುಲ್ ವಾಹಿದ್ ಮತ್ತು ಕ್ಯಾಥಡ್ರಾಲ್ ಸೊಸೈಟಿ ಸೇರಿದಂತೆ ಹಲವಾರು ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳು ನೋಂದಣಿಯಾಗಿವೆ.

ಮೈಸೂರು: ಮುಡಾದ 160 ನಿವೇಶನ​​ಗಳನ್ನು ಜಪ್ತಿಗೆ ಇಡಿ ಆದೇಶ
ಮುಡಾ ನಿವೇಶನ ಇಡಿ ಜಪ್ತಿ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on: Jan 29, 2025 | 9:50 AM

ಮೈಸೂರು, ಜನವರಿ 29: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನ​​ಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ (ED) ಆದೇಶ ಹೊರಡಿಸಿದೆ. 160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಎಲ್ಲ ನಿವೇಶನಗಳನ್ನು ಜಪ್ತಿ ಮಾಡುವಂತೆ ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಒಂದು ನಿವೇಶನ ಮೌಲ್ಯ 81 ಕೋಟಿ ರೂ. ಇದೆ. ಮಾರುಕಟ್ಟೆ ದರ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯವಿದೆ. ರವಿ ಎಂಬುವರ ಹೆಸರಲ್ಲಿ 31 ನಿವೇಶನ​, ಅಬ್ದುಲ್ ವಾಹಿದ್ ಎಂಬುವರ ಹೆಸರಲ್ಲಿ 41 ನಿವೇಶನ, ಕ್ಯಾಥಡ್ರಾಲ್ ಸೊಸೈಟಿ ಹೆಸರನಿಲ್ಲಿ 40 ನಿವೇಶನ, ಇತರರಿಗೆ ಸೇರಿದ 48 ನಿವೇಶನಗಳನ್ನು ಜಪ್ತಿ ಮಾಡುವಂತೆ ಹೇಳಿದೆ.

ನೋಂದಣಿಯಾಗಿದ್ದು ಯಾವಾಗ?

2023ರ ಸೆಪ್ಟೆಂಬರ್ 11ರಂದು ರವಿ ಹೆಸರಲ್ಲಿ 31 ನಿವೇನಗಳು ನೋಂದಣಿಯಾಗಿವೆ. ಮೈಸೂರು ನಗರದ ಹೃದಯಭಾಗ ಕುವೆಂಪುನಗರದಲ್ಲಿಯ 12 ನಿವೇಶನ​​ಗಳು, ದಟ್ಟಗಳ್ಳಿ, ವಿಜಯನಗರದಲ್ಲಿ 19 ನಿವೇಶನಗಳು ರವಿ ಹೆಸರಿಗೆ ನೋಂದಣಿಯಾಗಿವೆ.

ಇದನ್ನೂ ಓದಿ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: ಇಡಿ, ಲೋಕಾಯುಕ್ತಕ್ಕೆ ದೂರು

ಇನ್ನು ಅಬ್ದುಲ್ ವಾಹಿದ್ ಎಂಬುವರ ಹೆಸರಿಗೆ 2023ರ ಮಾರ್ಚ್​ 8ರಂದು ಒಂದೇ ದಿನದಲ್ಲಿ 28 ನಿವೇಶನಗಳು ನೋಂದಣಿಯಾಗಿವೆ. ಮತ್ತೆ, 2023ರ ಸೆಪ್ಟೆಂಬರ್​ 1ರಂದು ಅಬ್ದುಲ್ ವಾಹಿದ್​ ಹೆಸರಿಗೆ 13 ವಿಜಯನಗರ, ಜೆ.ಪಿ.ನಗರ, ನಾಚನಹಳ್ಳಿಪಾಳ್ಯದಲ್ಲಿನ ನಿವೇಶನಗಳು ನೋಂದಣಿಯಾಗಿವೆ.​

ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ವಂಚನೆ

ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಆಮಿಷವೊಡ್ಡಿ ಮಹಿಳೆಗೆ ವಂಚಿಸಲಾಗಿದೆ. ವಂಚನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ. ಆಲನಹಳ್ಳಿಯ ಪವಿತ್ರಾ, ಪತಿ ವಿಶ್ವನಾಥ್ ಶೆಟ್ಟಿ, ಪುತ್ರನ ವಿರುದ್ಧ ಆಲನಹಳ್ಳಿ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮುಡಾ ನಿವೇಶನ ಕೊಡಿಸುವುದಾಗಿ ಪವಿತ್ರಾ, ವಿಶ್ವನಾಥ್ ದಂಪತಿ ಮನಿಷಾ ಅವರಿಂದ 30 ಲಕ್ಷ ಹಣ ಪಡೆದಿದ್ದರು. ಹಣ ಪಡೆದು ಮುಡಾ ನಿವೇಶನ ನೀಡದೇ ವಂಚಿಸಿದ್ದಾರೆ. ಹಣ ವಾಪಸ್ ನೀಡುವುದಾಗಿ ಮನಿಷಾ ಅವರನ್ನು ಮನೆ ಬಳಿ ಕರೆಸಿಕೊಂಡು ಹಲ್ಲೆಗೈದಿರುವ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ