AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾದ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮುನ್ನವೇ ಸೇಲ್​ ಅಗ್ರಿಮೆಂಟ್​!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂಮಿ ಹಂಚಿಕೆಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ಬಹಿರಂಗಗೊಂಡಿದೆ. ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನೀಡಲಾದ ನಿವೇಶನಗಳನ್ನು ಕ್ರಯಪತ್ರದ ಮುಂಚೆಯೇ ಇತರರಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಹಲವು ವ್ಯಕ್ತಿಗಳು ಭಾಗಿಯಾಗಿದ್ದು, ಇದೀಗ ತನಿಖೆ ನಡೆಯುತ್ತಿದೆ.

ಮುಡಾದ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮುನ್ನವೇ ಸೇಲ್​ ಅಗ್ರಿಮೆಂಟ್​!
ಮುಡಾ
ದಿಲೀಪ್​, ಚೌಡಹಳ್ಳಿ
| Edited By: |

Updated on: Dec 06, 2024 | 11:58 AM

Share

ಮೈಸೂರು, ಡಿಸೆಂಬರ್​ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda) ಹಗರಣ ಕರ್ನಾಟಕದಲ್ಲಿ ಸಾಕಷ್ಟು ಸದ್ದು ಮಾಡಿದೆ. ಈ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಉರುಳಾಗಿ ಪರಿಣಮಿಸಿದೆ. ಇದೀಗ ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಮತ್ತೊಂದು ಅಕ್ರಮ ಬಯಲಾಗಿದೆ. ಕ್ರಯ ಪತ್ರ ಮುನ್ನವೇ ಸೇಲ್ ಅಗ್ರಿಮೆಂಟ್​​ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ.

ಏನಿದು ಪ್ರಕರಣ

ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರು 17 ಎಕರೆ ಪ್ರದೇಶದಲ್ಲಿನ 48 ನಿವೇಶನಗಳು ನಮ್ಮದು ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುತ್ತಾರೆ. ಆದರೆ, ಮುಡಾ ಅಧಿಕಾರಿಗಳು ಈ 17 ಎಕರೆ ಪ್ರದೇಶಗಳನ್ನು ರೈತರಿಂದ ನೇರವಾಗಿ ನಾವು ಖರೀದಿಸಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಾರೆ. ಕೊನೆಗೆ ನ್ಯಾಯಾಲಯ ಮಾನವೀಯ ದೃಷ್ಟಿಯಿಂದ ಸಂಘದ ಸದಸ್ಯರನ್ನು ಪರಿಗಣಿಸಿ, ಈ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಎಂದು ಮೂಡಾಗೆ ಸೂಚನೆ ನೀಡುತ್ತದೆ.

ಬಳಿಕ, ಮುಡಾ ಅಧಿಕಾರಿಗಳು ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನಿವೇಶನ ನೀಡಲು ನಿರ್ಧರಿಸುತ್ತದೆ. ಅದರಂತೆ ಮುಡಾ ಸಂಘದ ಸದಸ್ಯರ ಹೆಸರಿಗೆ ನಿವೇಶನಗಳ ಕ್ರಯ ಪತ್ರ ಮಾಡಿಕೊಡುತ್ತದೆ. ಆದರೆ, ಸಂಘದ ಸದಸ್ಯರು ಕ್ರಯ ಪತ್ರ ಆಗುವ ಒಂದು ತಿಂಗಳು ಮುನ್ನವೇ ಇನ್ನೊಬ್ಬರಿಗೆ ಸೇಲ್ ಅಗ್ರಿಮೆಂಟ್ ಕೊಟ್ಟಿದ್ದಾರೆ.

ಕೇಸ್​ ನಂ1: ಸೂರ್ಯಕುಮಾರಿ ಎಂಬುವರ ಹೆಸರಿಗೆ 2023ರ ನವೆಂಬರ್​ 29 ರಂದು ಕ್ರಯ ಪತ್ರ ಮಾಡಿಕೊಡಲಾಗುತ್ತದೆ. ಮುಡಾ ನಿವೇಶನ ಸಂಖ್ಯೆ 42ನ್ನು ಕ್ರಯ ಮಾಡಿಕೊಟ್ಟಿದೆ. ಆದರೆ, ಸೂರ್ಯಕುಮಾರಿ ಕ್ರಯ ಪತ್ರ ಆಗುವ ಮುನ್ನವೇ ಅಂದರೆ 2023ರ ಅಕ್ಟೋಬರ್​ 13 ರಂದು ನಿವೇಶನವನ್ನು ವಿನೋದ್ ಕುಮಾರ್ ಎಂಬುವರಿಗೆ ಸೇಲ್ ಅಗ್ರಿಮೆಂಟ್ ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣಕ್ಕೆ ಸಾಕ್ಷ್ಯ ನೀಡಿದ ಇಡಿ: ಸಿಎಂ ಸಿದ್ದರಾಮಯ್ಯಗೆ ಬಿಗಿಯಾದ ಉರುಳು

ಕೇಸ್ ನಂ 2: ಎ.ಫ್ರಾನ್ಸಿಸ್ ಎಂಬುವರಿಗೆ 2023ರ ಡಿಸೆಂಬರ್​ 15 ರಂದು ಮುಡಾ ನಿವೇಶನ ಸಂಖ್ಯೆ 128ನ್ನು ಕ್ರಯ ಮಾಡಿಕೊಟ್ಟಿದೆ. ಆದರೆ‌, ಕ್ರಯ ಪತ್ರ ಆಗುವ ಮುನ್ನವೇ ಅಂದರೆ 2023ರ ಡಿಸೆಂಬರ್​ 1 ರಂದು ಮುಂಜುನಾಥ್​ ಎಂಬುವರಿಗೆ ಸೇಲ್ ಅಗ್ರಿಮೆಂಟ್ ಮಾಡಿಕೊಡಲಾಗಿದೆ.

ಕೇಸ್ ನಂ3: ರತ್ನ ಎಂಬುವರಿಗೆ 2023ರ ಡಿಸೆಂಬರ್​ 15 ರಂದು ಮುಡಾ ನಿವೇಶನ ಸಂಖ್ಯೆ 13ನ್ನು ಕ್ರಯ ಮಾಡಿಕೊಟ್ಟಿದೆ. ಆದರೆ, ಕ್ರಯ ಪತ್ರ ಆಗುವ ಮುನ್ನವೇ ಅಂದರೆ 2023ರ ಡಿಸೆಂಬರ್​ 1 ರಂದೇ ಮಂಜುನಾಥ್ ಎಂಬುವರಿಗೆ ಸೇಲ್ ಅಗ್ರಿಮೆಂಟ್ ಮಾಡಿಕೊಡಲಾಗಿದೆ.

ಕೇಸ್ ನಂ4: ಶಿವಮ್ಮ ಎಂಬುವರಿಗೆ 2023ರ ಡಿಸೆಂಬರ್​​ 15 ರಂದು ಮುಡಾ ನಿವೇಶನ ಸಂಖ್ಯೆ 17ನ್ನು ಕ್ರಯ ಮಾಡಿಕೊಟ್ಟಿದೆ. ಆದರೆ, ಕ್ರಯ ಪತ್ರ ಆಗುವ ಮುನ್ನವೇ ಅಂದರೆ 2023 ಡಿಸೆಂಬರ್​ 1 ರಂದೇ ಮಂಜುನಾಥ್ ಎಂಬುವರಿಗೆ ಭೂಮಿ ಸೇಲ್ ಅಗ್ರಿಮೆಂಟ್ ಮಾಡಿಕೊಡಲಾಗಿದೆ.

ಕೇಸ್ ನಂ 5: ಮುಕುಂದ್ ಎಂಬುವರಿಗೆ 2023ರ ಡಿಸೆಂಬರ್​ 15 ರಂದು ಮುಡಾ ನಿವೇಶನ ಸಂಖ್ಯೆ 22ನ್ನು ಮುಡಾ ಕ್ರಯ ಮಾಡಿಕೊಟ್ಟಿದೆ. ಆದರೆ, ಕ್ರಯ ಪತ್ರ ಆಗುವ ಮುನ್ನವೇ ಮಂಜುನಾಥ್ ಎಂಬುವರಿಗೆ ಸೇಲ್​ ಅಗ್ರಿಮೆಂಟ್​ ಮಾಡಿಕೊಡಲಾಗಿದೆ.

ನಾಲ್ಕು ನಿವೇಶನಗಳ ಸೇಲ್​ ಅಗ್ರಿಮೆಂಟ್​ ಪಡೆದ ಮಂಜುನಾಥ್​ ಅಲಿಯಾಸ್ ಕಾರ್ತಿಕ ಬಡಾವಣೆ ಮಂಜುನಾಥ್ 50:50 ಅನುಪಾತದ ಮುಡಾ ಕೇಸ್​ನಲ್ಲಿ​​ ​​ಇಡಿ ತನಿಖೆ ಎದುರಿಸುತ್ತಿದ್ದಾರೆ. ಹೀಗೆ ತಮ್ಮ ಹೆಸರಿಗೆ ಕ್ರಯ, ಖಾತೆ ಆಗದೆ ಸಂಘದ ಸದಸ್ಯರು ಇನ್ನೊಬ್ಬರಿಗೆ ಭೂಮಿ ಮಾರಿದರಾ ಎಂಬ ಅನುಮಾನ ವ್ಯಕ್ತವಾಗಿದೆ. ಆಥವಾ ಭೂಮಿ ಕಬಳಿಸುವ ಸಂಚಿನಿಂದಲೇ ಸೇಲ್ ಅಗ್ರಿಮೆಂಟ್ ಮಾಡಿಕೊಂಡರಾ ಭೂಗಳ್ಳರು ಎಂಬ ಅನುಮಾನ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ