AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾಬಿಟ್ಟಿಯಾಗಿ ವಾಹನ ಪಾರ್ಕ್ ಮಾಡಿದರೆ ಬೀಳುತ್ತೆ ದಂಡ: ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಮೈಸೂರು

ಮೈಸೂರಿನಲ್ಲೂ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಮುಖ ರಸ್ತೆಗಳಲ್ಲಿ ಜನರಿಗೆ ಪಾರ್ಕಿಂಗ್ ಸಮಸ್ಯೆ ಎದುರಾಗಿದ್ದು, ಇದಕ್ಕೆ‌ ಪರಿಹಾರವಾಗಿ‌ ನಗರದಲ್ಲಿ ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.

ಬೇಕಾಬಿಟ್ಟಿಯಾಗಿ ವಾಹನ ಪಾರ್ಕ್ ಮಾಡಿದರೆ ಬೀಳುತ್ತೆ ದಂಡ: ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಮೈಸೂರು
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 16, 2023 | 9:29 PM

Share

ಮೈಸೂರು: ಮೈಸೂರು (Mysore) ಹೇಳಿ ಕೇಳಿ ಪಿಂಚಣಿದಾರರ ಸ್ವರ್ಗ. ಬೆಂಗಳೂರಿಗೆ ಹೋಲಿಸಿದರೆ ಮೈಸೂರಿನಲ್ಲಿ ವಾಹನದ ದಟ್ಟಣೆ ತುಂಬಾ ಕಡಿಮೆ. ಆದರೆ ಇತ್ತೀಚಿಗೆ ಮೈಸೂರಿನಲ್ಲೂ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಹೀಗಾಗಿ ಪ್ರಮುಖ ರಸ್ತೆಗಳಲ್ಲಿ ಜನರಿಗೆ ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಗಂಟೆ ಗಟ್ಟಲೇ ಕಾದರು ನಿಂತ ವಾಹನಗಳು ಕದಲುತ್ತಿಲ್ಲ. ಅದರಲ್ಲೂ ಕೆಲ ಅಂಗಡಿ ಮಾಲೀಕರು ಬೆಳಗ್ಗೆ ತಮ್ಮ ಕಾರನ್ನು ಪಾರ್ಕ್ ಮಾಡಿದರೆ ರಾತ್ರಿವರೆಗೂ ತೆಗೆಯುವುದೇ ಇಲ್ಲ. ಇದು ಮೈಸೂರಿನ ಕಾರು ಮಾಲೀಕರ ತಲೆ ನೋವಿಗೆ ಕಾರಣವಾಗಿದೆ. ಇದಕ್ಕೆ‌ ಪರಿಹಾರವಾಗಿ‌ ನಗರದಲ್ಲಿ ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆ (pay and parking system) ಜಾರಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.

ನಗರದ ಮೂರು ಕಡೆ ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆ

ಮೈಸೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಪೇ ಆ್ಯಂಡ್‌ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ದೇವರಾಜ ಅರಸು ರಸ್ತೆ, ಸಯ್ಯಾಜಿ ರಾವ್ ರಸ್ತೆ ಮತ್ತು ಅಶೋಕ ರಸ್ತೆಯಲ್ಲಿ ಇದು ಜಾರಿಗೆ ಬರಲಿದೆ. ಇದಕ್ಕಾಗಿ ಮೈಸೂರು ಪಾಲಿಕೆ ಕೌನ್ಸಿಲ್ ಒಪ್ಪಿಗೆ ಸಹ ನೀಡಿದೆ. ಈ ಮೂಲಕ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಬೇಕಾ ಬಿಟ್ಟಿ ಪಾರ್ಕಿಂಗ್‌ಗೆ ಬ್ರೇಕ್ ಹಾಕಬಹುದು ಅನ್ನೋದು ಪಾಲಿಕೆಯ ಅಭಿಪ್ರಾಯ.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಇನ್ನು ಜನ ಸಾಮಾನ್ಯರಿಗೆ ತೊಂದರೆಯಾಗದಿರಲಿ ಅಂತಾ ಮೊದಲ ಒಂದು ಗಂಟೆ ಅವಧಿಗೆ ಉಚಿತ ಪಾರ್ಕಿಂಗ್ ನೀಡಲು ಪಾಲಿಕೆ ಚಿಂತನೆ ನಡೆಸಿದೆ. ಇದಕ್ಕೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪೇ ಆ್ಯಂಡ್‌ ಪಾರ್ಕಿಂಗ್‌ ವ್ಯವಸ್ಥೆಗೆ ಮಿಶ್ರ ಪ್ರತಿಕ್ರಿಯೆ

ಪೇ ಆ್ಯಂಡ್‌ ಪಾರ್ಕಿಂಗ್‌ನ್ನು ಕೆಲವರು ಸ್ವಾಗತಿಸಿದರೆ ಮತ್ತೆ ಕೆಲವರು ವಿರೋಧಿಸಿದ್ದಾರೆ. ಈ‌ ಮೂಲಕ ಕೆಲವರು ಅನಗತ್ಯವಾಗಿ ದಿನವಿಡಿ ಪಾರ್ಕಿಂಗ್ ಮಾಡುವುದು ತಪ್ಪಲಿದೆ ಅಂತಾ ಕೆಲವರು ಹೇಳಿದ್ದಾರೆ. ಇಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದೇವೆ ಇದರ ಮಧ್ಯೆ ಇದೊಂದು ಹೊರೆ ಅಂತ ಜನ ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಒಟ್ಟಾರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಬಾರಿಗೆ ಜಾರಿಯಾಗುತ್ತಿರುವ ಪೇ ಆ್ಯಂಡ್‌ ಪಾರ್ಕಿಂಗ್ ಸಖತ್ ಸದ್ದು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:28 pm, Fri, 16 June 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?