Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆರೋಗ್ಯವಾಗಿದ್ದ ನಾಲ್ಕು ಹಸುಗಳು ಪಶು ಆಹಾರ ಸೇವಿಸಿ ಸಾವು

ಮೈಸೂರಿನಲ್ಲಿ ರೈತ ಜಯಕೃಷ್ಣನಿಗೆ ಸೇರಿದ ಸುಮಾರು 3ಲಕ್ಷ ಮೌಲ್ಯದ ನಾಲ್ಕು ಹಸುಗಳು ಮೃತಪಟ್ಟಿವೆ. ಹಸುಗಳು ಸಧ್ರಡವಾಗಿ ಬೆಳೆಯಲಿ ಎಂದು ಕುಟುಂಬಸ್ಥರು ಪಶು ಆಹಾರ ನೀಡಿದ್ದರು. ಪಶು ಆಹಾರ ಸೇವಿಸಿದ್ದ ಕೂಡಲೇ ತೀವೃ ಅಸ್ವಸ್ಥವಾದ ನಾಲ್ಕು ಹಸುಗಳು ಅಸ್ವಸ್ಥವಾದ ಕೆಲವೇ ಹೊತ್ತಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿವೆ.

ಮೈಸೂರು: ಆರೋಗ್ಯವಾಗಿದ್ದ ನಾಲ್ಕು ಹಸುಗಳು ಪಶು ಆಹಾರ ಸೇವಿಸಿ ಸಾವು
ಹಸು ಸಾವು
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 31, 2023 | 3:17 PM

ಮೈಸೂರು, ಅ.31: ಆರೋಗ್ಯವಾಗಿದ್ದ ನಾಲ್ಕು ಹಸುಗಳು (Cow) ಪಶು ಆಹಾರ ಸೇವಿಸಿ ಮೃತಪಟ್ಟಿರುವ (Death) ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ರೈತ ಜಯಕೃಷ್ಣನಿಗೆ ಸೇರಿದ ಸುಮಾರು 3ಲಕ್ಷ ಮೌಲ್ಯದ ನಾಲ್ಕು ಹಸುಗಳು ಮೃತಪಟ್ಟಿವೆ. ಹಸುಗಳು ಸಧ್ರಡವಾಗಿ ಬೆಳೆಯಲಿ ಎಂದು ಕುಟುಂಬಸ್ಥರು ಪಶು ಆಹಾರ ನೀಡಿದ್ದರು. ಪಶು ಆಹಾರ ಸೇವಿಸಿದ್ದ ಕೂಡಲೇ ತೀವೃ ಅಸ್ವಸ್ಥವಾದ ನಾಲ್ಕು ಹಸುಗಳು ಅಸ್ವಸ್ಥವಾದ ಕೆಲವೇ ಹೊತ್ತಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿವೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐದು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐದು ಕಳ್ಳತನ ಪ್ರಕರಣ, ಮಾದಕ ಜಾಲ ಪ್ರಕರಣ ಭೇದಿಸಿದ್ದಾರೆ. ಮೈಸೂರು ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿದ್ದು ಒಟ್ಟು 55 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕಳ್ಳ ಮಾಲು ವಶಕ್ಕೆ ಪಡೆದಿದ್ದಾರೆ. ಹಾಗೂ 15 ಕೆಜಿ 580 ಗ್ರಾಂ ಗಾಂಜಾ ಮತ್ತು 217ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಸರ್ಕಾರಿ ಅತಿಥಿ ಗೃಹದ ಬಳಿಯೇ ನಿಷೇಧಿತ ಮಾದಕ ಮಾರಾಟ ಮಾಡುತ್ತಿದ್ದರು. ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಗಳು, ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇನ್ನು ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಆರೋಪಿಯಿಂದ 12 ಲಕ್ಷ ಮೌಲ್ಯದ 200ಗ್ರಾಂ ಚಿನ್ನ ಮತ್ತು 29ಗ್ರಾಂ ಬೆಳ್ಳಿ ಆಭರಣಗಳು ವಶಕ್ಕೆ ಪಡೆಯಲಾಗಿದೆ. ಹಾಗೂ ಮೈಸೂರು ದಸರಾ ವೇಳೆ ಮಾರಾಟ ಮಾಡಲು ತರಲಾಗಿದ್ದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಿ: ಕರ್ನಾಟಕ ಹೈಕೋರ್ಟ್ ಸೂಚನೆ

ಬೀದರ್​ನಲ್ಲಿ ಬಸ್​ಗೆ ಬೆಂಕಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡಿಪೋಗೆ ಸೇರಿದ ಬಸ್ ಗೆ ಮಹಾರಾಷ್ಟ್ರ ರಾಜ್ಯದ ಲಾತೂರ್ ಜಿಲ್ಲೆಯ ಉಮರ್ಗಾ ತಾಲೂಕಿನ ತುರುರಿ ಬಳಿ ಕರ್ನಾಟಕ ಬಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ 8:30ರ ಸುಮಾರಿಗೆ ಪ್ರಯಾಣಿಕರನ್ನ ಒತ್ತಾಯ ಪೂರ್ವಕವಾಗಿ ಕೆಳಗಿಳಿಸಿ 30 ಕ್ಕೂ ಹೆಚ್ಚು ಜನರಿದ್ದ ತಂಡದ ಕಿಡಿಗೇಡಿಗಳು ಬೆಂಕಿಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದಾ ಸುಟ್ಟು ಕರಕಲಾಗಿರುವ ಬಸ್ ನ್ನ ಈಗ ಬೀದರ್ ಗೆ ತೆಗೆದುಕೊಂಡು ಬಂದಿದ್ದು ಬಸ್ ಸಂಪೂರ್ಣವಾಗಿ ಸುಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ