AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆರೋಗ್ಯವಾಗಿದ್ದ ನಾಲ್ಕು ಹಸುಗಳು ಪಶು ಆಹಾರ ಸೇವಿಸಿ ಸಾವು

ಮೈಸೂರಿನಲ್ಲಿ ರೈತ ಜಯಕೃಷ್ಣನಿಗೆ ಸೇರಿದ ಸುಮಾರು 3ಲಕ್ಷ ಮೌಲ್ಯದ ನಾಲ್ಕು ಹಸುಗಳು ಮೃತಪಟ್ಟಿವೆ. ಹಸುಗಳು ಸಧ್ರಡವಾಗಿ ಬೆಳೆಯಲಿ ಎಂದು ಕುಟುಂಬಸ್ಥರು ಪಶು ಆಹಾರ ನೀಡಿದ್ದರು. ಪಶು ಆಹಾರ ಸೇವಿಸಿದ್ದ ಕೂಡಲೇ ತೀವೃ ಅಸ್ವಸ್ಥವಾದ ನಾಲ್ಕು ಹಸುಗಳು ಅಸ್ವಸ್ಥವಾದ ಕೆಲವೇ ಹೊತ್ತಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿವೆ.

ಮೈಸೂರು: ಆರೋಗ್ಯವಾಗಿದ್ದ ನಾಲ್ಕು ಹಸುಗಳು ಪಶು ಆಹಾರ ಸೇವಿಸಿ ಸಾವು
ಹಸು ಸಾವು
ರಾಮ್​, ಮೈಸೂರು
| Edited By: |

Updated on: Oct 31, 2023 | 3:17 PM

Share

ಮೈಸೂರು, ಅ.31: ಆರೋಗ್ಯವಾಗಿದ್ದ ನಾಲ್ಕು ಹಸುಗಳು (Cow) ಪಶು ಆಹಾರ ಸೇವಿಸಿ ಮೃತಪಟ್ಟಿರುವ (Death) ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ರೈತ ಜಯಕೃಷ್ಣನಿಗೆ ಸೇರಿದ ಸುಮಾರು 3ಲಕ್ಷ ಮೌಲ್ಯದ ನಾಲ್ಕು ಹಸುಗಳು ಮೃತಪಟ್ಟಿವೆ. ಹಸುಗಳು ಸಧ್ರಡವಾಗಿ ಬೆಳೆಯಲಿ ಎಂದು ಕುಟುಂಬಸ್ಥರು ಪಶು ಆಹಾರ ನೀಡಿದ್ದರು. ಪಶು ಆಹಾರ ಸೇವಿಸಿದ್ದ ಕೂಡಲೇ ತೀವೃ ಅಸ್ವಸ್ಥವಾದ ನಾಲ್ಕು ಹಸುಗಳು ಅಸ್ವಸ್ಥವಾದ ಕೆಲವೇ ಹೊತ್ತಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿವೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐದು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐದು ಕಳ್ಳತನ ಪ್ರಕರಣ, ಮಾದಕ ಜಾಲ ಪ್ರಕರಣ ಭೇದಿಸಿದ್ದಾರೆ. ಮೈಸೂರು ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿದ್ದು ಒಟ್ಟು 55 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕಳ್ಳ ಮಾಲು ವಶಕ್ಕೆ ಪಡೆದಿದ್ದಾರೆ. ಹಾಗೂ 15 ಕೆಜಿ 580 ಗ್ರಾಂ ಗಾಂಜಾ ಮತ್ತು 217ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಸರ್ಕಾರಿ ಅತಿಥಿ ಗೃಹದ ಬಳಿಯೇ ನಿಷೇಧಿತ ಮಾದಕ ಮಾರಾಟ ಮಾಡುತ್ತಿದ್ದರು. ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಗಳು, ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇನ್ನು ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಆರೋಪಿಯಿಂದ 12 ಲಕ್ಷ ಮೌಲ್ಯದ 200ಗ್ರಾಂ ಚಿನ್ನ ಮತ್ತು 29ಗ್ರಾಂ ಬೆಳ್ಳಿ ಆಭರಣಗಳು ವಶಕ್ಕೆ ಪಡೆಯಲಾಗಿದೆ. ಹಾಗೂ ಮೈಸೂರು ದಸರಾ ವೇಳೆ ಮಾರಾಟ ಮಾಡಲು ತರಲಾಗಿದ್ದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಿ: ಕರ್ನಾಟಕ ಹೈಕೋರ್ಟ್ ಸೂಚನೆ

ಬೀದರ್​ನಲ್ಲಿ ಬಸ್​ಗೆ ಬೆಂಕಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡಿಪೋಗೆ ಸೇರಿದ ಬಸ್ ಗೆ ಮಹಾರಾಷ್ಟ್ರ ರಾಜ್ಯದ ಲಾತೂರ್ ಜಿಲ್ಲೆಯ ಉಮರ್ಗಾ ತಾಲೂಕಿನ ತುರುರಿ ಬಳಿ ಕರ್ನಾಟಕ ಬಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ 8:30ರ ಸುಮಾರಿಗೆ ಪ್ರಯಾಣಿಕರನ್ನ ಒತ್ತಾಯ ಪೂರ್ವಕವಾಗಿ ಕೆಳಗಿಳಿಸಿ 30 ಕ್ಕೂ ಹೆಚ್ಚು ಜನರಿದ್ದ ತಂಡದ ಕಿಡಿಗೇಡಿಗಳು ಬೆಂಕಿಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದಾ ಸುಟ್ಟು ಕರಕಲಾಗಿರುವ ಬಸ್ ನ್ನ ಈಗ ಬೀದರ್ ಗೆ ತೆಗೆದುಕೊಂಡು ಬಂದಿದ್ದು ಬಸ್ ಸಂಪೂರ್ಣವಾಗಿ ಸುಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ