AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮೈಸೂರು ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಈ ಹಿನ್ನಲೆ ಇಂದು(ಮೇ.23) ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ದಾಳಿ ಮಾಡಿತ್ತು. ಈ ವೇಳೆ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಮ್​, ಮೈಸೂರು
| Edited By: |

Updated on: May 23, 2024 | 9:56 PM

Share

ಮೈಸೂರು, ಮೇ.23: ಮೈಸೂರಿನ(Mysore) ಅರಮನೆ ಮಂಡಳಿ ಕಚೇರಿ ಮೇಲೆ ಇಂದು(ಮೇ.23) ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್​ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಈ ಹಿನ್ನಲೆ ದೂರು ಆಧರಿಸಿ ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್​​ಪಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

ಅಕ್ರಮ ಸಿಲಿಂಡರ್ ರೀಫಿಲಿಂಗ್ ಅಡ್ಡೆಗಳ ಮೇಲೆ ದಾಳಿ

ಕೋಲಾರ: ಜಿಲ್ಲೆಯ ಕೆಜಿಎಫ್​​ ನಗರದ ಆಂಡರ್ಸನ್ ಪೇಟೆಯಲ್ಲಿ ಅಕ್ರಮ ಸಿಲಿಂಡರ್ ರೀಫಿಲಿಂಗ್ ಅಡ್ಡೆಗಳ ಮೇಲೆ ಆಹಾರ ಇಲಾಖೆ ನಿರ್ದೇಶಕ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 136 ಗೃಹೋಪಯೋಗಿ ಮತ್ತು ಕಮರ್ಷಿಯಲ್ ಸಿಲಿಂಡರ್​ಗಳು ಜಪ್ತಿಯಾಗಿದೆ. ಅಕ್ರಮವಾಗಿ ಇತರೆ ಉದ್ದೇಶಕ್ಕೆ ಬಳಸುತ್ತಿದ್ದ ಮಾಹಿತಿ ಮೇರೆಗೆ ಇಂದು ದಾಳಿ ನಡೆಸಲಾಗಿತ್ತು. ಈ ಕುರಿತು ಆಂಡರ್ಸನ್ ಪೇಟೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 6 ಭ್ರಷ್ಟ ಅಧಿಕಾರಿಗಳು ಖೆಡ್ಡಾಕ್ಕೆ

ಬೈಕ್ ಸವಾರ ಕಂದಕಕ್ಕೆ ಬಿದ್ದು ಸಾವು, ಮತ್ತೊಬ್ಬ ಗಂಭೀರ

ವಿಜಯನಗರ: ತುಂಗಭದ್ರಾ ಜಲಾಶಯದ ಹಿನ್ನೀರು ಬಳಿ ಕಂದಕಕ್ಕೆ ಬೈಕ್ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಜಗದೀಶ್ (28) ಮೃತ ರ್ದುದೈವಿ. ಇನ್ನು  ಶಶಾಂಕ್ ಪಾಟೀಲ್​ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹೊಸಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಇಳಕಲ್​ಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್