AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವಾಬ್ರಿಗೇಡ್​ಗೆ ನೋಟಿಸ್: ಪೊಲೀಸರ ನಡೆಗೆ ಚಕ್ರವರ್ತಿ ಸೂಲಿಬೆಲೆ ಬೇಸರ

yuva brigade: ಟಿ.ನರಸೀಪುರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವಾ ಬ್ರಿಗೇಡ್ ಕಾರ್ಯಕರ್ತರಿಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಠಾಣೆಯ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಟಿ.ನರಸೀಪುರ ಪೊಲೀಸರ ನಡೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರ್ಯಾರು ನದಿಗೆ ಇಳಿಯುತ್ತಾರೆ ಎಂಬೆಲ್ಲ ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ.

ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವಾಬ್ರಿಗೇಡ್​ಗೆ ನೋಟಿಸ್: ಪೊಲೀಸರ ನಡೆಗೆ ಚಕ್ರವರ್ತಿ ಸೂಲಿಬೆಲೆ ಬೇಸರ
ಚಿಂತಕ ಚಕ್ರವರ್ತಿ ಸೂಲಿಬೆಲೆ
ರಾಮ್​, ಮೈಸೂರು
| Edited By: |

Updated on:Nov 12, 2023 | 8:57 AM

Share

ಮೈಸೂರು, ನವೆಂಬರ್​​​ 12: ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವಾ ಬ್ರಿಗೇಡ್ (yuva brigade) ಕಾರ್ಯಕರ್ತರಿಗೆ ಜಿಲ್ಲೆಯ ಟಿ.ನರಸೀಪುರ ಠಾಣೆಯ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಟಿ.ನರಸೀಪುರ ಪೊಲೀಸರ ನಡೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಬೇಸರ ವ್ಯಕ್ತಪಡಿಸಿದ್ದಾರೆ. ಟಿ.ನರಸೀಪುರದಲ್ಲಿ ನದಿ ಸ್ವಚ್ಛತೆಗೆ ಯುವ ಬ್ರಿಗೇಡ್ ಮುಂದಾಗಿತ್ತು. ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಕುರಿತಾಗಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದು, ಯುವಾಬ್ರಿಗೇಡ್ ನದಿ ಸ್ವಚ್ಛತೆ ಮಾಡುವುದು ಹೊಸತೇನೂ ಅಲ್ಲ, ಮತ್ತು ಯಾರಿಗೂ ಗೊತ್ತಿಲ್ಲದ ಸಂಗತಿಯೂ ಅಲ್ಲ. ಟಿ.‌ನರಸೀಪುರದಲ್ಲಿ ಕಳೆದ ಆರೇಳು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಡೆದುಕೊಂಡು ಬಂದಿದೆ. ಈ ವರ್ಷ ಅಚ್ಚರಿ ಎಂಬಂತೆ ಪೊಲೀಸರು ನೊಟಿಸ್ ಹೊರಡಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಟ್ವೀಟ್

ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರ್ಯಾರು ನದಿಗೆ ಇಳಿಯುತ್ತಾರೆ ಎಂಬೆಲ್ಲ ಪ್ರಶ್ನೆಗಳನ್ನು ಕೇಳಿದ್ದಾರೆ. ನಡೆಯುವ ಅವಘಡಕ್ಕೆ ನೀವೇ‌ ಕಾರಣವೆಂದು ಎಚ್ಚರಿಸುತ್ತಿದ್ದಾರೆ. ಇದು ಸಮಾಜದ ಮೇಲಿನ ಕಾಳಜಿಯಲ್ಲ, ಬದಲಿಗೆ ಇಂತಹ ಚಟುವಟಿಕೆಗಳನ್ನು ನಿಲ್ಲಿಸುವ ಹತಾಶ ಪ್ರಯತ್ನ ಎಂಬುದು ಎಂಥವನಿಗೂ ಅರಿವಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್​​ ಕಾರ್ಯಕರ್ತರು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಹೊಡೆದಿದ್ದಾರೆ: ಚಕ್ರವರ್ತಿ ಸೂಲಿಬೆಲೆ ಆರೋಪ

ಈ ನದಿ ಸ್ವಚ್ಛತಾ ಕಾರ್ಯಕ್ರಮವನ್ನು ಬಲು ದೊಡ್ಡದ್ದಾಗಿ ಮಾಡಬೇಕೆಂಬುದು ನಮ್ಮ ಬಯಕೆ. ತಡೆಯೊಡ್ಡಿದಾಗ ನದಿ‌ ನೀರಿನ ಹರಿವೂ ಹೆಚ್ಚುತ್ತದೆ ಎಂದ ಮೇಲೆ ಯುವಾಬ್ರಿಗೇಡ್ ಸುಮ್ಮನಿರಲು ಸಾಧ್ಯವೇನು? ನಿಮ್ಮ ಅಭಿಪ್ರಾಯಕ್ಕಾಗಿ ಕಾಯುವೆ ಎಂದು ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಪೊಲೀಸ್​ ನೋಟಿಸ್​ನಲ್ಲಿ ಏನಿದೆ?

ನವೆಂಬರ್​ 10 ರಂದು ಗುಪ್ತಮಾಹಿತಿಯಿಂದ ತಿಳಿದು ಬಂದಿರುವುದೇನೆಂದರೆ ಯುವಾ ಬ್ರಿಗೇಡ್​, ಟಿ.‌ನರಸೀಪುರ ವತಿಯಿಂದ ಸಂಗಮ ಆರತಿ ಅಂಗವಾಗಿ ನವೆಂಬರ್​ 12 ರಂದು ಬೆಳಿಗ್ಗೆ 06-00 ಗಂಟೆಗೆ ಕಾವೇರಿ, ಕಪಿ‌ ನದಿಗಳ ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಕಪಿಲಾ ನದಿ ಸ್ನಾನ ಘಟ್ಟದಲ್ಲಿ ಯುವಾ ಬ್ರಿಗೇಡ್ ಟಿ.ನರಸೀಪುರದ ನಿಖಿಲ್, ವೆಂಕಟೇಶ್ ಮತ್ತು ಶ್ರೀ ರಾಮಾನುಜನಂ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದೆ.

ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರ ಬಾಯಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ

ಈ ಕಾರ್ಯಕ್ರಮದ ಉಸ್ತುವಾರಿಯನ್ನು ಯಾರು ವಹಿಸಿಕೊಂಡಿರುತ್ತಾರೆ? ಎಷ್ಟು ಜನ ಸೇರುತ್ತಾರೆ? ಇದರ ಚಟುವಟಿಕೆ ಏನು? ಯಾರು, ನೀರಿಗೆ ಇಳಿದು ನದಿಯನ್ನು ಸ್ವಚ್ಛಮಾಡುತ್ತಾರೆ? ಎಂಬ ಬಗ್ಗೆ ಮಾಹಿತಿ ಇರುವುದಿಲ್ಲ, ಆದ್ದರಿಂದ ಕೂಡಲೇ ಮಾಹಿತಿ ನೀಡುವಂತೆ ಕೋರಲಾಗಿದೆ.

ನದಿ ಸ್ವಚ್ಛತೆಗೆ ಈಜು ಬಾರದವರನ್ನು ಇಳಿಸಬಾರದು. ಈಜು ಬಾರದವರನ್ನು ನದಿ ನೀರಿನಲ್ಲಿ ಇಳಿಯದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಮುಂಜಾಗ್ರತ ಕ್ರಮಗಳನ್ನು ವಹಿಸದೆ ಯಾವುದೇ ಅತಾಚುರ್ಯ ಅವಘಡ, ಜೀವ ಹಾನಿಗಳು ಸಂಭವಿಸಿದಲ್ಲಿ ನಿವೇ ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 am, Sun, 12 November 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​