AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಿಯಾಲಿಟಿ ಚೆಕ್​​: ಸಿದ್ದರಾಮಯ್ಯ ತವರಿನಲ್ಲೇ ಸರ್ಕಾರದ ಕನಸಿನ ಯೋಜನೆಗೆ ಎಳ್ಳುನೀರು: ಇಂದಿರಾ ಕ್ಯಾಂಟೀನ್​ ಸ್ಥಗಿತ​​

ಸರಿಯಾದ ನಿರ್ವಹಣೆ ಇಲ್ಲದೇ ನಗರದ ಬನ್ನಿಮಂಟಪದ ಜೋಡಿ ತೆಂಗಿನಮರ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್​​ ಸ್ಥಗಿತವಾಗಿದೆ.ಲಕ್ಷಾಂತರ ರೂ. ವೆಚ್ಚದ ಕ್ಯಾಂಟೀನ್ ಸೊರಗಿದ್ದು,​ ಮುರಿದ ಕಿಟಕಿ, ಬಾಗಿಲುಗಳ ಸುತ್ತಮುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಜನಪ್ರತಿನಿಧಿಗಳ ಲೋಪ, ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಇಂದಿರಾ ಕ್ಯಾಂಟೀನ್ ಬಂಡವಾಳ ಬಯಲಾಗಿದೆ. 

ಟಿವಿ9 ರಿಯಾಲಿಟಿ ಚೆಕ್​​: ಸಿದ್ದರಾಮಯ್ಯ ತವರಿನಲ್ಲೇ ಸರ್ಕಾರದ ಕನಸಿನ ಯೋಜನೆಗೆ ಎಳ್ಳುನೀರು: ಇಂದಿರಾ ಕ್ಯಾಂಟೀನ್​ ಸ್ಥಗಿತ​​
ಇಂದಿರಾ ಕ್ಯಾಂಟಿನ್
ದಿಲೀಪ್​, ಚೌಡಹಳ್ಳಿ
| Edited By: |

Updated on:Dec 08, 2023 | 10:50 AM

Share

ಮೈಸೂರು, ಡಿಸೆಂಬರ್​​ 08: ಸರಿಯಾದ ನಿರ್ವಹಣೆ ಇಲ್ಲದೇ ನಗರದ ಬನ್ನಿಮಂಟಪದ ಜೋಡಿ ತೆಂಗಿನಮರ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ (​​Indira canteen) ಸ್ಥಗಿತವಾಗಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಸರ್ಕಾರದ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್​ಗೆ ಎಳ್ಳುನೀರು ಬಿಡಲಾಗಿದೆ. ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಪ್ರತಿನಿಧಿಸುವ ಕ್ಷೇತ್ರದಲ್ಲೆ ಜನರ ಹೊಟ್ಟೆ ತುಂಬಿಸಬೇಕಿದ್ದ ಇಂದಿರಾ ಕ್ಯಾಂಟೀನ್​ಗೆ ಬೀಗ ಹಾಕಿ ಬಂದ್​ ಮಾಡಲಾಗಿದೆ. ಲಕ್ಷಾಂತರ ರೂ. ವೆಚ್ಚದ ಕ್ಯಾಂಟೀನ್ ಸೊರಗಿದ್ದು,​ ಮುರಿದ ಕಿಟಕಿ, ಬಾಗಿಲುಗಳ ಸುತ್ತಮುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಜನಪ್ರತಿನಿಧಿಗಳ ಲೋಪ, ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲಾಗಿದೆ.

ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಸರ್ಕಾರದ ಹಣ ಲೂಟಿ?

ಊಟ ತಿಂಡಿ ಕೊಡುತ್ತಿದ್ದೇವೆ ಅಂತ ಲೆಡ್ಜರ್ ಪುಸ್ತಕದಲ್ಲಿ ನಮೂದು ಮಾಡಲಾಗಿದೆ. ಆ ಮೂಲಕ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಸರ್ಕಾರ ಹಣ ಲೂಟಿ ಮಾಡುತ್ತಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಪ್ರತಿದಿನ ಲೆಡ್ಜರ್ ಪುಸ್ತಕದಲ್ಲಿ ಊಟದ ವಿವರ ನಮೂದು ಮಾಡಲಾಗುತ್ತಿದೆ. ಇಂದಿನ ದಿನಾಂಕದಲ್ಲೂ ಊಟದ ವಿವರ ನಮೂದಿಸಲಾಗಿದೆ.

ಇದನ್ನೂ ಓದಿ: ಕಳೆದ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಬೇಕಿದ್ದ ಕ್ಷೇತ್ರದಲ್ಲಿ ಮಹತ್ವಕಾಂಕ್ಷಿ ಇಂದಿರಾ ಕ್ಯಾಂಟೀನ್​ಗೆ ಗ್ರಹಣ! ಯಾರಿಗೂ ಕಿಂಚಿತ್ತೂ ಕಾಳಜಿ ಇಲ್ಲ

150 ಇಡ್ಲಿ, 10 kg ಬಾತು, 5 ಕೆ.ಜಿ. ಚಟ್ನಿ ಕೊಡಲಾಗಿದೆ ಎಂದು ಎಂಟ್ರಿಯಾಗಿದೆ. ಲೆಡ್ಜರ್ ಪುಸ್ತಕವನ್ನ ಗುತ್ತಿಗೆದಾರರು ಕ್ಯಾಂಟೀನ್​ನಲ್ಲೆ ಬಿಟ್ಟುಹೋಗುತ್ತಾರೆ.

ಸರಿಯಾಗಿ ಉಪಹಾರ ಮತ್ತು ಊಟವನ್ನ ಕಳುಹಿಸುತ್ತಿಲ್ಲ: ದೇವಿರಮ್ಮ 

ಈ ಕುರಿತಾಗಿ ಟಿವಿ9ಗೆ ಇಂದಿರಾ ಕ್ಯಾಂಟೀನ್​ನಲ್ಲಿ ಕೆಲಸ ಮಾಡುತ್ತಿದ್ದ ದೇವಿರಮ್ಮ ಮಾತನಾಡಿ, ಕಳೆದ 5 ತಿಂಗಳಿನಿಂದ ಕ್ಯಾಂಟೀನ್ ಬಂದ್ ಆಗಿದ್ದು, 5 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಕೇರಳ ಮೂಲದವರು ಕ್ಯಾಂಟೀನ್ ನೋಡಿಕೊಳ್ಳುತ್ತಿದ್ದರು. ಸರಿಯಾಗಿ ಉಪಹಾರ ಮತ್ತು ಊಟವನ್ನ ಕಳುಹಿಸುತ್ತಿಲ್ಲ. ಹೀಗಾಗಿ ಜನರು ಇಂದಿರಾ ಕ್ಯಾಂಟೀನ್ ಬರುವುದು ಕಡಿಮೆ ಮಾಡಿದರು. ಕ್ಯಾಂಟೀನ್​ಗೆ ನೀರಿನ ಬಿಲ್ ಹಾಗೂ ವಿದ್ಯುತ್ ಬಿಲ್ ಬಾಕಿ ಇದೆ ಎಂದಿದ್ದಾರೆ.

ಇದನ್ನೂ ಓದಿ: Indira Canteen: ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿನ ಯೋಜನೆಗೆ ಕಗ್ಗತ್ತಲು!

ಅಧಿಕಾರಿಗಳು ನೀರಿನ ಸಂಪರ್ಕ ಹಾಗೂ ವಿದ್ಯುತ್ ಕಡಿತಗೊಳಿಸಿದ್ದಾರೆ. ನೀರಿಲ್ಲದಿದ್ದರು ಹೊರಗಡೆಯಿಂದ ನೀರು ತಂದು ಕ್ಯಾಂಟೀನ್ ನೋಡಿಕೊಳ್ಳುತ್ತಿದೆ. ಇತ್ತೀಚಿಗೆ ಊಟ‌ ತಿಂಡಿಯನ್ನ ಸರಿಯಾಗಿ ಕಳುಹಿಸುತ್ತಿರಲಿಲ್ಲ. ಬೆಳಗ್ಗೆ ಕೊಟ್ಟ ತಿಂಡಿಯನ್ನೇ ಮಧ್ಯಾಹ್ನಕ್ಕೂ ಕೊಡುತ್ತಿದ್ದರು. ಇದರಿಂದ ಜನರು ಕ್ಯಾಂಟೀನ್​ಗೆ ಬರುವುದು ಕಡಿಮೆ. ಇದೊಂದೆ ಅಲ್ಲ ಬೇರೆ ಕಡೆ ಕೂಡ ಕ್ಯಾಂಟೀನ್​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:41 am, Fri, 8 December 23

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು