AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಿಂದ ಮಗನ ಕೊಲೆ ಕೇಸ್​ಗೆ ಟ್ವಿಸ್ಟ್: ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದ ಅಪ್ಪ

ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಈ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಆತ್ಮರಕ್ಷಣೆಗಾಗಿ ತಂದೆಯಿಂದ ಮಗನ ಕೊಲೆ ಮಾಡಲಾಗಿದೆ ಎಂದು ಟಿವಿ9ಗೆ ಸಂಬಂಧಿಗಳಿಂದ ಮಾಹಿತಿ ನೀಡಲಾಗಿದೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ತಂದೆಯಿಂದ ಮಗನ ಕೊಲೆ ಕೇಸ್​ಗೆ ಟ್ವಿಸ್ಟ್: ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದ ಅಪ್ಪ
ತಂದೆ ಸಯ್ಯದ್ ಅಸ್ಲಾಂ, ಮಗ ಅವೈಸ್
ರಾಮ್​, ಮೈಸೂರು
| Edited By: |

Updated on: Nov 30, 2023 | 3:18 PM

Share

ಮೈಸೂರು, ನವೆಂಬರ್​​ 30: ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಗಲಾಟೆ ಕೊನೆಗೆ ಕೊಲೆ (crime) ಯಲ್ಲಿ ಅಂತ್ಯವಾಗಿದೆ. ಸದ್ಯ ಈ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಆತ್ಮರಕ್ಷಣೆಗಾಗಿ ತಂದೆಯಿಂದ ಮಗನ ಕೊಲೆ ಮಾಡಲಾಗಿದೆ ಎಂದು ಟಿವಿ9ಗೆ ಸಂಬಂಧಿಗಳಿಂದ ಮಾಹಿತಿ ನೀಡಲಾಗಿದೆ. ನಗರದ ಬನ್ನಿಮಂಟಪದಲ್ಲಿ ಘಟನೆ ನಡೆದಿತ್ತು. ಅವೈಸ್ (23) ಕೊಲೆಯಾಗಿದ್ದ ಮಗ. ತಂದೆ ಸಯ್ಯದ್​ ಅಸ್ಲಾಂ  ವಿರುದ್ದ ಕೊಲೆ ಆರೋಪ ಮಾಡಲಾಗಿದೆ.

ಮಾದಕ ವ್ಯಸನಿಯಾಗಿದ್ದ ಅವೈಸ್​, ನಿತ್ಯ ಮಾದಕ ವಸ್ತು ಸೇವಿಸಿ ತಂದೆ ತಾಯಿಗೆ ಕಿರುಕುಳ ನೀಡುತ್ತಿದ್ದ. ಮಾನಸಿಕವಾಗಿ ದೈಹಿಕವಾಗಿ ಹಿಂಸೆ ನೀಡುತ್ತಿದ್ದ. ಕೊಲೆಯಾದ ದಿನವೂ ಮನೆಯಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ತಂದೆಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಮೈಸೂರು: ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ಮಗನನ್ನೇ ಕೊಂದ ಅಪ್ಪ!

ಆಗ ಆತ್ಮರಕ್ಷಣೆಗೆ ಅಸ್ಲಂ ಮುಂದಾಗಿದ್ದು, ಚಾಕು ಕಸಿದುಕೊಳ್ಳುವ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಅಸ್ಲಂ ಮಗನ ಕೊಲೆ ಮಾಡಿಲ್ಲ. ಮಗನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಡ ನಡೆದಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ

ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮೀ, (11 ತಿಂಗಳ) ಯದುನಾಯಕ್, (4 ವರ್ಷ) ಹೆಣ್ಣ ಮಗು ಮೃತರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಸಾವನಪ್ಪಿದ್ದರು.‌ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಕೊಲೆ: ಇಬ್ಬರ ಬಂಧನ

ಕಲಬುರಗಿ: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಬರ್ಬರ ಕೊಲೆ ಮಾಡಿದ್ದವರನ್ನು ನರೋಣ ಪೊಲೀಸರು ಬಂಧಿಸಿದ್ದಾರೆ. ಆಕಾಶ್ (22) ತಾಯಿ ಸರೋಜಾ ಬಂಧಿತರು. ಸಿದ್ರಾಮಪಪ್ಪ ಕಾಮನ್ (75)ಮೃತ ವ್ಯಕ್ತಿ. ಜಿಲ್ಲೆಯ ಜವಳಗಾ ಬಿ ಗ್ರಾಮದಲ್ಲಿ ನ.27 ರಂದು ಕೊಲೆ ನಡೆದಿತ್ತು. ಕಲಬುರಗಿ ತಾಲ್ಲೂಕಿನ ಕುಮಿಸಿ ಗ್ರಾಮಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದರು. ಕ್ರೂಸರ್​ನಲ್ಲಿ ವಾಪಸ್ ಬರುವಾಗ ಸರೋಜಾ, ಸಿದ್ರಾಮಪ್ಪನ ಗಾಡಿಯ ಮೇಲೆ ಕೂರುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯುತ್ತಿದೆ ಬ್ರಾಂಡೆಡ್ ಸಿಗರೇಟ್, ಬಟ್ಟೆಗಳ ನಕಲು, ಅಂಗಡಿಗಳ ಮೇಲೆ ಸಿಸಿಬಿ ದಾಳಿ

ವಯಸ್ಸಾದವನಿಗೆ ಗಾಡಿಯ ಮೇಲೆ ಕೂರುವಂತೆ ಹೇಳಿದಕ್ಕೆ ಸಿದ್ರಾಮಪ್ಪ ಸರೋಜಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸರೋಜಾ ತನ್ನ ಮಗನಿಗೆ ಅಜ್ಜ ಬೈದಿರುವ ವಿಚಾರ ಹೇಳಿದ್ದಾರೆ. ಅಜ್ಜ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರೋದಕ್ಕೆ ರೊಚ್ಚಿಗೆದ್ದು ಚಾಕುವಿನಿಂದ ಇರಿದು ಕೊಲೆ‌ ಮಾಡಿದ್ದ. ಸದ್ಯ ತಾಯಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ