AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಿಂದ ಮಗನ ಕೊಲೆ ಕೇಸ್​ಗೆ ಟ್ವಿಸ್ಟ್: ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದ ಅಪ್ಪ

ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಈ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಆತ್ಮರಕ್ಷಣೆಗಾಗಿ ತಂದೆಯಿಂದ ಮಗನ ಕೊಲೆ ಮಾಡಲಾಗಿದೆ ಎಂದು ಟಿವಿ9ಗೆ ಸಂಬಂಧಿಗಳಿಂದ ಮಾಹಿತಿ ನೀಡಲಾಗಿದೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ತಂದೆಯಿಂದ ಮಗನ ಕೊಲೆ ಕೇಸ್​ಗೆ ಟ್ವಿಸ್ಟ್: ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದ ಅಪ್ಪ
ತಂದೆ ಸಯ್ಯದ್ ಅಸ್ಲಾಂ, ಮಗ ಅವೈಸ್
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 30, 2023 | 3:18 PM

Share

ಮೈಸೂರು, ನವೆಂಬರ್​​ 30: ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಗಲಾಟೆ ಕೊನೆಗೆ ಕೊಲೆ (crime) ಯಲ್ಲಿ ಅಂತ್ಯವಾಗಿದೆ. ಸದ್ಯ ಈ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಆತ್ಮರಕ್ಷಣೆಗಾಗಿ ತಂದೆಯಿಂದ ಮಗನ ಕೊಲೆ ಮಾಡಲಾಗಿದೆ ಎಂದು ಟಿವಿ9ಗೆ ಸಂಬಂಧಿಗಳಿಂದ ಮಾಹಿತಿ ನೀಡಲಾಗಿದೆ. ನಗರದ ಬನ್ನಿಮಂಟಪದಲ್ಲಿ ಘಟನೆ ನಡೆದಿತ್ತು. ಅವೈಸ್ (23) ಕೊಲೆಯಾಗಿದ್ದ ಮಗ. ತಂದೆ ಸಯ್ಯದ್​ ಅಸ್ಲಾಂ  ವಿರುದ್ದ ಕೊಲೆ ಆರೋಪ ಮಾಡಲಾಗಿದೆ.

ಮಾದಕ ವ್ಯಸನಿಯಾಗಿದ್ದ ಅವೈಸ್​, ನಿತ್ಯ ಮಾದಕ ವಸ್ತು ಸೇವಿಸಿ ತಂದೆ ತಾಯಿಗೆ ಕಿರುಕುಳ ನೀಡುತ್ತಿದ್ದ. ಮಾನಸಿಕವಾಗಿ ದೈಹಿಕವಾಗಿ ಹಿಂಸೆ ನೀಡುತ್ತಿದ್ದ. ಕೊಲೆಯಾದ ದಿನವೂ ಮನೆಯಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ತಂದೆಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಮೈಸೂರು: ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ಮಗನನ್ನೇ ಕೊಂದ ಅಪ್ಪ!

ಆಗ ಆತ್ಮರಕ್ಷಣೆಗೆ ಅಸ್ಲಂ ಮುಂದಾಗಿದ್ದು, ಚಾಕು ಕಸಿದುಕೊಳ್ಳುವ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಅಸ್ಲಂ ಮಗನ ಕೊಲೆ ಮಾಡಿಲ್ಲ. ಮಗನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಡ ನಡೆದಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ

ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮೀ, (11 ತಿಂಗಳ) ಯದುನಾಯಕ್, (4 ವರ್ಷ) ಹೆಣ್ಣ ಮಗು ಮೃತರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಸಾವನಪ್ಪಿದ್ದರು.‌ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಕೊಲೆ: ಇಬ್ಬರ ಬಂಧನ

ಕಲಬುರಗಿ: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಬರ್ಬರ ಕೊಲೆ ಮಾಡಿದ್ದವರನ್ನು ನರೋಣ ಪೊಲೀಸರು ಬಂಧಿಸಿದ್ದಾರೆ. ಆಕಾಶ್ (22) ತಾಯಿ ಸರೋಜಾ ಬಂಧಿತರು. ಸಿದ್ರಾಮಪಪ್ಪ ಕಾಮನ್ (75)ಮೃತ ವ್ಯಕ್ತಿ. ಜಿಲ್ಲೆಯ ಜವಳಗಾ ಬಿ ಗ್ರಾಮದಲ್ಲಿ ನ.27 ರಂದು ಕೊಲೆ ನಡೆದಿತ್ತು. ಕಲಬುರಗಿ ತಾಲ್ಲೂಕಿನ ಕುಮಿಸಿ ಗ್ರಾಮಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದರು. ಕ್ರೂಸರ್​ನಲ್ಲಿ ವಾಪಸ್ ಬರುವಾಗ ಸರೋಜಾ, ಸಿದ್ರಾಮಪ್ಪನ ಗಾಡಿಯ ಮೇಲೆ ಕೂರುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯುತ್ತಿದೆ ಬ್ರಾಂಡೆಡ್ ಸಿಗರೇಟ್, ಬಟ್ಟೆಗಳ ನಕಲು, ಅಂಗಡಿಗಳ ಮೇಲೆ ಸಿಸಿಬಿ ದಾಳಿ

ವಯಸ್ಸಾದವನಿಗೆ ಗಾಡಿಯ ಮೇಲೆ ಕೂರುವಂತೆ ಹೇಳಿದಕ್ಕೆ ಸಿದ್ರಾಮಪ್ಪ ಸರೋಜಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸರೋಜಾ ತನ್ನ ಮಗನಿಗೆ ಅಜ್ಜ ಬೈದಿರುವ ವಿಚಾರ ಹೇಳಿದ್ದಾರೆ. ಅಜ್ಜ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರೋದಕ್ಕೆ ರೊಚ್ಚಿಗೆದ್ದು ಚಾಕುವಿನಿಂದ ಇರಿದು ಕೊಲೆ‌ ಮಾಡಿದ್ದ. ಸದ್ಯ ತಾಯಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?