AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Pak: ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್​

ಪ್ರಪಂಚದಲ್ಲಿ ಹೆಸರು ಮಾಡಿರುವ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್, ಇದೀಗ​ ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡಿದೆ.

Mysore Pak: ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್​
ಮೈಸೂರ್ ಪಾಕ್
ರಾಮ್​, ಮೈಸೂರು
| Edited By: |

Updated on: Jul 21, 2023 | 9:20 AM

Share

ಮೈಸೂರು, (ಜುಲೈ 21): ಒಂದೊಂದು ಊರಿಗೆ ಹೋದಾಗಲೂ ಒಂದೊಂದು ಆಹಾರದ ವಿಶೇಷತೆಗಳು ಇರುತ್ತವೆ. ಅವು ಕೆಲ ಪ್ರದೇಶಗಳಿಗೆ ಮಾತ್ರ ಫೇಮಸ್​ ಆಗಿವೆ. ಆದ್ರೆ, ತನ್ನ ಹೆಸರಿನಲ್ಲಿಯೇ ಮೈಸೂರನ್ನು ಪ್ರತಿನಿಧಿಸುವ ಮೈಸೂರ್ ಪಾಕ್ (Mysore pak) ದೇಶ ವಿದೇಶಗಳ ತನಕ ಹೆಸರು ವಾಸಿಯಾಗಿದೆ. ಇದೀಗ ಈ ಮೈಸೂರುಪಾಕ್​ ವಿಶ್ವದ ಸ್ಟ್ರೀಟ್​ ಫುಡ್​ನಲ್ಲಿ (Street Food) 14ನೇ ಸ್ಥಾನ ಪಡೆದುಕೊಂಡಿದೆ. ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ್ದ ಮೈಸೂರುಪಾಕ್, ಮೈಸೂರು ಅಂದ್ರೆ ಮೈಸೂರುಪಾಕ್ ಎನ್ನುವಷ್ಟು ಖ್ಯಾತಿ ಗಳಿಸಿದ್ದು, ಇದೀಗ ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡಿದೆ. 4.4 ರೇಟಿಂಗ್ ಪಡೆದ ಮೈಸೂರುಪಾಕ್, ಆನ್‌ಲೈನ್‌ ಮಾರ್ಕೆಟ್​ನಲ್ಲಿ ವಿಶ್ವದ 50 ತಿಂಡಿ ತಿನಿಸುಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಇನ್ನು ಕುಲ್ಫಿಗೆ 18ನೇ ಸ್ಥಾನ, ಕುಲ್ಫಿ ಫಲೂದಾಗೆ 32ನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ನೀವು ಮನೆಯಲ್ಲಿಯೇ ಮೈಸೂರ್ ಪಾಕ್ ತಯಾರಿಸಲು ಇಲ್ಲಿದೆ ಸುಲಭ ವಿಧಾನ

ಟೇಸ್ಟ್ ಅಟ್ಲಾಸ್, ವಿಶ್ವದ ಬೆಸ್ಟ್ ಸ್ಟ್ರೀಟ್ ಫುಡ್ ಸ್ವೀಟ್​ನ ಟಾಪ್ 50​ ಪಟ್ಟಿ ಬಿಡುಗಡೆ ಮಾಡಿದ್ದು,  ಇದರಲ್ಲಿ ಮೈಸೂರುಪಾಕ್​ಗೆ 4.4 ರೇಟಿಂಗ್​ನಿಂದಿಗೆ 14ನೇ ಸ್ಥಾನ​ ಸಿಕ್ಕಿದೆ. ಇನ್ನು ಕುಲ್ಫಿಗೆ 4.3 ರೇಟಿಂಗ್​ ನೋಂದಿಗೆ 18ನೇ ಸ್ಥಾನ ನೀಡಲಾಗಿದೆ. ಫಲೂದಾ 4.0 ರೇಟಿಂಗ್​ನೊಂದಿಗೆ 32ನೇ ಸ್ಥಾನ ಪಡೆದುಕೊಂಡಿದೆ.

ಇಂತಹ ಮೈಸೂರ್ ಪಾಕ್ ನಮ್ಮ ಮೈಸೂರಿನಲ್ಲಿಯೇ ತಯಾರಾಗಿದ್ದು ಎನ್ನುವುದೇ ಕನ್ನಡಿಗರೆಲ್ಲರಿಗೂ ಹೆಮ್ಮೆ ತರುವ ವಿಚಾರ. ಅಷ್ಟೇ ಅಲ್ಲದೆ ದೇಶ ವಿದೇಶಗಳಿಗೆ ಮೈಸೂರಿನ ಹೆಸರನ್ನು ಪರಿಚಯಿಸಿದ ಸಿಹಿ ತಿನಿಸು ಕೂಡ ಹೌದು. ಇಂತಹ ತಿನಿಸು ಮೈಸೂರು ಅರಮನೆಯ ಪಾಕಶಾಲೆಯಲ್ಲಿಯೇ ತಯಾರಾಗಿದ್ದು ಎನ್ನುವುದೇ ಸಂತಸದ ವಿಚಾರ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?