AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿಗೆ ತೆರಳುವ ಪ್ರವಾಸಿಗರಿಗೆ ನಿರಾಸೆ: ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ

ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿಯ ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. 750 ಕೆಜಿ ತೂಕದ ಈ ಅಂಬಾರಿಯ ಕೆಳಭಾಗ ಮತ್ತು ಹಿಂಭಾಗದ ಮರದ ಕೆಲಸ ಸೇರಿದಂತೆ ಹಲವು ರಿಪೇರಿ ಕಾರ್ಯಗಳು ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರವಾಸಿಗರಿಗೆ ಇದು ನಿರಾಶೆಯನ್ನುಂಟು ಮಾಡಿದ್ದರೂ, ಅಂಬಾರಿಯ ಸಂರಕ್ಷಣೆಗಾಗಿ ಈ ಕ್ರಮ ಅವಶ್ಯಕವಾಗಿದೆ.

ಮೈಸೂರಿಗೆ ತೆರಳುವ ಪ್ರವಾಸಿಗರಿಗೆ ನಿರಾಸೆ: ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ
ಅಂಬಾರಿ
ರಾಮ್​, ಮೈಸೂರು
| Edited By: |

Updated on:Dec 06, 2024 | 11:01 AM

Share

ಮೈಸೂರು, ಡಿಸೆಂಬರ್​ 06: ಅರಮನೆ (Palace) ಮತ್ತು ಅಂಬಾರಿಯನ್ನು (Ambari) ವೀಕ್ಷಿಸಲು ನಿತ್ಯ ಸಾವಿರಾರು ಜನರು ಮೈಸೂರಿಗೆ (Mysore) ತೆರಳುತ್ತಾರೆ. ಅರಮನೆಯೊಳಗೆ ಅಂಬಾರಿಯನ್ನು ಕಂಡು ಅನೇಕರು ಸೆಲ್ಫಿ ತೆಗೆದುಕೊಳ್ಳುತ್ತಾರೆ. ಆದರೆ, ಕೆಲ ದಿನಗಳ ಕಾಲ 750 ಕೆಜಿ ತೂಕದ ಅಂಬಾರಿ ವೀಕ್ಷಣೆಗೆ ಅವಕಾಶವಿರುವುದಿಲ್ಲ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮೈಸೂರು ಅರಮನೆಯಲ್ಲಿ ಮೊದಲು ಗಮನ ಸೆಳೆಯುವುದು ಚಿನ್ನದ ಅಂಬಾರಿ. ಆದರೆ, ಅಂಬಾರಿ ವೀಕ್ಷಣೆಗೆ ನಿರ್ಬಂಧ ಹೇರಿದ್ದು ಪ್ರವಾಸಿಗರಲ್ಲಿ ನಿರಾಸೆ ಉಂಟು ಮಾಡಿದೆ. ಅಂಬಾರಿ ಕೆಳಗೆ ಹಾಗೂ ಹಿಂಭಾಗ ಮರದ ಕೆಲಸ‌, ಸೇರಿದಂತೆ ವಿವಿಧ ರಿಪೇರಿ ಕೆಲಸ ಇರವುದರಿಂದ ವೀಕ್ಷಣೆಗೆ ಬ್ರೇಕ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿ ವೀಕ್ಷಣೆಗೆ ಅವಕಾಶವಿಲ್ಲ.

ಇದನ್ನೂ ಓದಿ: Mysuru Dasara Mahotsav-2024: ಅಂಬಾರಿಯೊಳಗೆ ಚಾಮುಂಡಿಯನ್ನು ಹೊತ್ತ ಅಭಿಮನ್ಯುನ ನಡಿಗೆ ವರ್ಣಿಸಲದಳ!

ಮೈಸೂರು ದಸರಾ ಉತ್ಸವದಲ್ಲಿ ಪ್ರಮುಖ ಆಕರ್ಷಣೆ ಬಿಂದು ರತ್ನ ಖಚಿತ 750 ಕೆಜಿ ತೂಕದ ಚಿನ್ನದ ಅಂಬಾರಿ. ವಿಜಯನಗರ ಸಾಮ್ರಾಜ್ಯದ ಸ್ಥಾಪಕರಾದ ಹಕ್ಕ-ಬುಕ್ಕರ ಸೇರಿದ ರತ್ನ ಖಚಿತ ಚಿನ್ನದ ಅಂಬಾರಿ ಮೊದಲಿಗೆ ಆನೆಗುಂದಿಯಲ್ಲಿರುತ್ತದೆ. ಆನೆಗುಂದಿಯಲ್ಲಿನ ಅಂಬಾರಿ ಮೈಸೂರಿಗೆ ಬಂದಿದ್ದೇ ರೋಚಕವಾಗಿದೆ.

ಬುಕ್ಕನು ಹಂಪಿಯಲ್ಲಿ ವಿಜಯನಗರ ಸಾಮ್ರಾಜ್ಯದ ಎರಡನೇ ರಾಜಧಾನಿ ಸ್ಥಾಪನೆ ಮಾಡುತ್ತಾನೆ. ಅಲ್ಲಿಗೆ ಅಂಬಾರಿ ಸ್ಥಳಾಂತರವಾಗುತ್ತದೆ. ವಿಜಯನಗರ ಸಾಮ್ರಾಜ್ಯ ನಾಶವಾದಾಗ ಅಂಬಾರಿಯನ್ನು ಸಂರಕ್ಷಣೆಗಾಗಿ ಆಂದ್ರದ ಪೆನಗೊಂಡಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಬಳಿಕ ಕೆಲವು ವರ್ಷದ ನಂತರ ಶ್ರೀರಂಗಪಟ್ಟಣ. ನಂತರ ಮೈಸೂರಿಗೆ ಬರುತ್ತದೆ. ಹೀಗೆ ಅಂಬಾರಿ ಹಲವು ರೋಚಕತೆಯಿಂದ ಮೂಲಕ ಮೈಸೂರಿನಲ್ಲಿ ನೆಲೆಯೂರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:39 am, Fri, 6 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್