AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?

ಐದು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ತೆಗೆದಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?
ವರ್ಗಾವಣೆ ಆದೇಶ, ಪೊಲೀಸರ ಜೊತೆ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on: Dec 10, 2023 | 9:43 AM

Share

ಮೈಸೂರು, ಡಿಸೆಂಬರ್​ 10: ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್​ಗಳಿಗೆ (Constable) ಪೊಲೀಸ್ (Police)​ ಇಲಾಖೆ ವರ್ಗಾವಣೆಯ ಶಿಕ್ಷೆ ನೀಡಿತೇ ಎಂಬ ಪ್ರಶ್ನೆ ಉದ್ಭವವಾಗಿದೆ. ಕೆ.ಆರ್.ನಗರ (KR Nagar) ಠಾಣೆಯ ಪೊಲೀಸ್​ ಪೇದೆಗಳಾದ ಪುನೀತ್​, ಹರೀಶ್​ ವರ್ಗಾವಣೆಗೊಂಡ ಅಧಿಕಾರಿಗಳು.

ಐದು ದಿನಗಳ ಹಿಂದೆ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ಮಾಡಿದ್ದರು. ಪೇದೆಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕರು ಬೈದಿದ್ದರು. ಅಲ್ಲದೆ ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತ ಯುವಕರು ಪೊಲೀಸರಿಗೆ ದಮ್ಕಿ ಹಾಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌

ವಿಷಯ ತಿಳಿದು ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ ಮಗನಿಗೆ ಬುದ್ಧಿ ಹೇಳಿ ಕಳುಹಿಸಿದ್ದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಗಲಾಟೆ ನಡೆದ ಮರುದಿನವೇ ಇಬ್ಬರು ಪೊಲೀಸ್​ ಪೇದೆಗಳು ವರ್ಗಾವಣೆಯಾಗಿದ್ದಾರೆ.

ಹರೀಶ್‌ ಕೆ.ಆರ್.ನಗರ ಠಾಣೆಯಿಂದ ಬಿಳಿಕೆರೆ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪುನೀತ್‌ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ, ಪೊಲೀಸ್ ಇಲಾಖೆ​ ಕಾನ್ಸ್‌ಟೇಬಲ್​ಗಳಿಗೆ ವರ್ಗಾವಣೆಯ ಶಿಕ್ಷೆ ನೀಡಿತೆ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!