AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?

ಐದು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ತೆಗೆದಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?
ವರ್ಗಾವಣೆ ಆದೇಶ, ಪೊಲೀಸರ ಜೊತೆ ಗಲಾಟೆ
TV9 Web
| Edited By: |

Updated on: Dec 10, 2023 | 9:43 AM

Share

ಮೈಸೂರು, ಡಿಸೆಂಬರ್​ 10: ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್​ಗಳಿಗೆ (Constable) ಪೊಲೀಸ್ (Police)​ ಇಲಾಖೆ ವರ್ಗಾವಣೆಯ ಶಿಕ್ಷೆ ನೀಡಿತೇ ಎಂಬ ಪ್ರಶ್ನೆ ಉದ್ಭವವಾಗಿದೆ. ಕೆ.ಆರ್.ನಗರ (KR Nagar) ಠಾಣೆಯ ಪೊಲೀಸ್​ ಪೇದೆಗಳಾದ ಪುನೀತ್​, ಹರೀಶ್​ ವರ್ಗಾವಣೆಗೊಂಡ ಅಧಿಕಾರಿಗಳು.

ಐದು ದಿನಗಳ ಹಿಂದೆ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ಮಾಡಿದ್ದರು. ಪೇದೆಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕರು ಬೈದಿದ್ದರು. ಅಲ್ಲದೆ ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತ ಯುವಕರು ಪೊಲೀಸರಿಗೆ ದಮ್ಕಿ ಹಾಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌

ವಿಷಯ ತಿಳಿದು ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ ಮಗನಿಗೆ ಬುದ್ಧಿ ಹೇಳಿ ಕಳುಹಿಸಿದ್ದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಗಲಾಟೆ ನಡೆದ ಮರುದಿನವೇ ಇಬ್ಬರು ಪೊಲೀಸ್​ ಪೇದೆಗಳು ವರ್ಗಾವಣೆಯಾಗಿದ್ದಾರೆ.

ಹರೀಶ್‌ ಕೆ.ಆರ್.ನಗರ ಠಾಣೆಯಿಂದ ಬಿಳಿಕೆರೆ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪುನೀತ್‌ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ, ಪೊಲೀಸ್ ಇಲಾಖೆ​ ಕಾನ್ಸ್‌ಟೇಬಲ್​ಗಳಿಗೆ ವರ್ಗಾವಣೆಯ ಶಿಕ್ಷೆ ನೀಡಿತೆ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ