AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?

ಐದು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ತೆಗೆದಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ವರ್ಗಾವಣೆ ಶಿಕ್ಷೆ?
ವರ್ಗಾವಣೆ ಆದೇಶ, ಪೊಲೀಸರ ಜೊತೆ ಗಲಾಟೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 10, 2023 | 9:43 AM

ಮೈಸೂರು, ಡಿಸೆಂಬರ್​ 10: ಕುಡಿದು ಗಲಾಟೆ ಮಾಡುತ್ತಿದ್ದ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್​ಗಳಿಗೆ (Constable) ಪೊಲೀಸ್ (Police)​ ಇಲಾಖೆ ವರ್ಗಾವಣೆಯ ಶಿಕ್ಷೆ ನೀಡಿತೇ ಎಂಬ ಪ್ರಶ್ನೆ ಉದ್ಭವವಾಗಿದೆ. ಕೆ.ಆರ್.ನಗರ (KR Nagar) ಠಾಣೆಯ ಪೊಲೀಸ್​ ಪೇದೆಗಳಾದ ಪುನೀತ್​, ಹರೀಶ್​ ವರ್ಗಾವಣೆಗೊಂಡ ಅಧಿಕಾರಿಗಳು.

ಐದು ದಿನಗಳ ಹಿಂದೆ ಕೆ.ಆರ್​.ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೂತು ಕುಡಿಯುತ್ತಿದ್ದ ಯುವಕರನ್ನು ಪೊಲೀಸರು ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಪೊಲೀಸರ ಜೊತೆ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಪುತ್ರ ಸುನೀಲ್​ ಮತ್ತು ಆತನ ಸ್ನೇಹಿತರು ಗಲಾಟೆ ಮಾಡಿದ್ದರು. ಪೇದೆಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕರು ಬೈದಿದ್ದರು. ಅಲ್ಲದೆ ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತ ಯುವಕರು ಪೊಲೀಸರಿಗೆ ದಮ್ಕಿ ಹಾಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌

ವಿಷಯ ತಿಳಿದು ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ ಮಗನಿಗೆ ಬುದ್ಧಿ ಹೇಳಿ ಕಳುಹಿಸಿದ್ದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಗಲಾಟೆ ನಡೆದ ಮರುದಿನವೇ ಇಬ್ಬರು ಪೊಲೀಸ್​ ಪೇದೆಗಳು ವರ್ಗಾವಣೆಯಾಗಿದ್ದಾರೆ.

ಹರೀಶ್‌ ಕೆ.ಆರ್.ನಗರ ಠಾಣೆಯಿಂದ ಬಿಳಿಕೆರೆ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪುನೀತ್‌ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಪ್ರಭಾವಿ ಮಕ್ಕಳನ್ನು ಪ್ರಶ್ನಿಸಿದ್ದಕ್ಕೆ, ಪೊಲೀಸ್ ಇಲಾಖೆ​ ಕಾನ್ಸ್‌ಟೇಬಲ್​ಗಳಿಗೆ ವರ್ಗಾವಣೆಯ ಶಿಕ್ಷೆ ನೀಡಿತೆ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್