AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರಿನ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ದಾಸ್ತಾನನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಸನಪುರ ಗ್ರಾಮದಲ್ಲಿ ನಡೆಯುತ್ತಿದ್ದ ಮೆಫೆಡ್ರೋನ್ ತಯಾರಿಕಾ ಘಟಕವನ್ನು ಭೇದಿಸಿ, 7.35 ಕೆ.ಜಿ. ಮೆಫೆಡ್ರೋನ್ ಹಾಗೂ 41 ಕೆ.ಜಿ. ಕಚ್ಚಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್
ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್
ರಾಮ್​, ಮೈಸೂರು
| Edited By: |

Updated on: Mar 28, 2026 | 1:18 PM

Share

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ

ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ ಗ್ರಾಮದಲ್ಲಿ ಇರುವ ಪಕ್ಕದ ಆಸ್ಪತ್ರೆ ಕಾವಲ್‌ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಹುಣಸೂರು ಟೌನ್ ರೆಹಮತ್ ಮೊಹಲ್ಲಾ ನಿವಾಸಿಯ ಶೆಡ್‌ನಲ್ಲಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.

ಪೊಲೀಸರು ಜಪ್ತು ಮಾಡಿದ ವಸ್ತುಗಳು

ಪೊಲೀಸರು 7.35 ಕೆ.ಜಿ ತೂಕದ ಮೆಫೆಡ್ರೋನ್ ಮತ್ತು 41 ಕೆ.ಜಿ ತೂಕದ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಸಿಕೊಂಡಿದ್ದು, ಒಟ್ಟು 48 ಕೆ.ಜಿ ತೂಕದ ಡ್ರಗ್ಸ್ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಈ ರೀತಿಯಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಣೆ ಮತ್ತು ವಿತರಣೆ ಮಾಡುತ್ತಿದ್ದಂತೆ ಪೊಲೀಸರು ವರದಿ ನೀಡಿದ್ದಾರೆ. ಪ್ರಕರಣವನ್ನು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ