AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

Mysore Devaraja Market: ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು
ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ
ರಾಮ್​, ಮೈಸೂರು
| Edited By: ಸಾಧು ಶ್ರೀನಾಥ್​|

Updated on: Aug 16, 2023 | 10:45 AM

Share

ಮೈಸೂರು, ಆಗಸ್ಟ್​ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).

ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.

Also read: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ