AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

Mysore Devaraja Market: ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು
ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ
Follow us
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​

Updated on: Aug 16, 2023 | 10:45 AM

ಮೈಸೂರು, ಆಗಸ್ಟ್​ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).

ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.

Also read: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು