AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

Mysore Devaraja Market: ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು
ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ
ರಾಮ್​, ಮೈಸೂರು
| Edited By: |

Updated on: Aug 16, 2023 | 10:45 AM

Share

ಮೈಸೂರು, ಆಗಸ್ಟ್​ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).

ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.

Also read: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ