AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ಸಾವು

ಕರ್ನಾಟಕದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ ಹಲವಾರು ಜನರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಬೈಕ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿಯೂ ಅಪಘಾತಗಳು ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿವೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿಯಲ್ಲಿಯೂ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾಳೆ.

ಮೈಸೂರು: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ಸಾವು
ಅಪಘಾತ
ರಾಮ್​, ಮೈಸೂರು
| Edited By: |

Updated on: Jun 04, 2025 | 5:35 PM

Share

ಮೈಸೂರು, ಜೂನ್​ 04: ಮೈಸೂರು (Mysore) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಜೆ.ಪಿ ಹುಂಡಿ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಂಚಿಪುರ ಗ್ರಾಮದ ನಿವಾಸಿಗಳಾದ ಚೆನ್ನಮಲ್ಲಮ್ಮ, ಮಂಗಳು ರೂಪ, ಅಳಿಯ ಚಿನ್ನಸ್ವಾಮಿ ಮೃತದುರ್ದೈವಿಗಳು. ಮೂವರು ಮಾದನಹಳ್ಳಿಯಿಂದ ತಮ್ಮ ಊರಿಗೆ ತೆರೆಳ್ಳುತ್ತಿದ್ದರು. ಲಾರಿ ಹುಲ್ಲಹಳ್ಳಿಯಿಂದ ಸಂಗಮ ಕಡೆಗೆ ತೆರಳುತ್ತಿತ್ತು. ದಾರಿ ಮಧ್ಯೆ ಜೆಪಿ ಹುಂಡಿ ಬಳಿ ಅಪಘಾತ ಸಂಭವಿಸಿದೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬಾಳ ಫ್ಲೈ ಓವರ್ ಬಳಿ ಅಪಘಾತ: ಇಬ್ಬರ ಸಾವು

ಬೆಂಗಳೂರು: ಹೆಬ್ಬಾಳ ಫ್ಲೈ ಓವರ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಅರ್ಜುನ್ (37), ಬಹದ್ದೂರ್ (24) ಮೃತದುರ್ದೈವಿಗಳು. ಮೃತರು ಹೆಚ್​ಎಸ್​ಆರ್​ ಲೇಔಟ್ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದರು. ನಂದಿ ಹಿಲ್​ನಿಂದ ಬೆಂಗಳೂರು ಬರುವಾಗ ಮಾರ್ಗ ಮಧ್ಯೆ ಬೆಳಿಗ್ಗೆ 8:15 ಕ್ಕೆ ಅಪಘಾತ ಸಂಭವಿಸಿದೆ. ಪಲ್ಸರ್ 220 ಬೈಕ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಗುದ್ದಿದೆ. ಅಪಘಾತ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಇಬ್ಬರ ಮೃತದೇಹ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರು ಹೈದರಾಬಾದ್ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು ಹೈದರಾಬಾದ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್​ಗೆ ಆಂಧ್ರ ಮೂಲದ‌ ಕಾರು ಡಿಕ್ಕಿ ಹೊಡೆದಿದೆ. ಆಂಧ್ರದ ಕಳ್ಯಾಣದುರ್ಗ ಎಂಎಲ್ಎ ಅಮಲಿನೇನಿ ಸುರೇಂದ್ರಬಾಬು ಅವರಿಂದ ಅಪಘಾತ‌ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ದೇವನಹಳ್ಳಿ ತಾಲೂಕಿನ ಆವತಿ ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಎರಡು ಬೆನ್ಜ್ ಹಾಗೂ ಟ್ರಾಕ್ಟರ್ ನಡುವೆ ಸಂಭವಿಸಿದೆ. ಅಪಘಾತದಲ್ಲಿ ಟ್ಯ್ರಾಕ್ಟರ್​ನಲ್ಲಿದ್ದ ರೈತ ಲವ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರೈತ ಹೊಸ ಟ್ರ್ಯಾಕ್ಟರ್​ ತೆಗೆದುಕೊಂಡು ಮನೆ ಕಡೆ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ
Image
ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಲ್ಲಿ ಹೆಚ್ಚಿದ ಒಳಹರಿವು, ಇಲ್ಲಿದೆ ವಿವರ
Image
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು
Image
ಕರ್ನಾಟಕದಲ್ಲಿ ಹಲವು ಅವಾಂತರ ಸೃಷ್ಟಿಸಿದ ಮಳೆ: ಕಾರು, ಲಾರಿ ಪಲ್ಟಿ, 3 ಸಾವು
Image
ನಾನೇ 10 ಲಕ್ಷ ಕೊಡ್ತೀನಿ ನನ್ನ ಮಗಳ ತಂದುಕೊಡಿ...ತಂದೆ ಕಣ್ಣೀರು!

ಇದನ್ನೂ ಓದಿ: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ: ವಿಡಿಯೋ ನೋಡಿ

ಬಸ್​, ಲಾರಿ ನಡುವೆ ಅಪಘಾತ

ಬೆಳಗಾವಿ: ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ಬಳಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಲಾರಿ ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್​ನಡಿ ಸಿಲುಕಿ ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ (70) ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಪ್ರಕರಣ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ