AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು, ಕಾರು ಚಾಲಕ ಪೊಲೀಸರ ವಶಕ್ಕೆ

ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ಕರ್ನಾಟಕ-ಕೇರಳ ಗಡಿಯಲ್ಲೂ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು, ಹೈಫೈ ರೆಸಾರ್ಟ್​​ಗಳಲ್ಲೂ ಶೋಧ ನಡೆಸುತ್ತಿದ್ದಾರೆ. ಸ್ಯಾಂಟ್ರೋ ಮಿತ್ರರ ಬಳಗವನ್ನೆಲ್ಲ ಸಂಪರ್ಕಿಸಿರುವ ಪೊಲೀಸರು‌, ಪ್ರತಿ ಜಿಲ್ಲೆಯಲ್ಲೂ ಶೋಧ ನಡೆಸುತ್ತಿದ್ದಾರೆ.‌

Santro Ravi: ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು, ಕಾರು ಚಾಲಕ ಪೊಲೀಸರ ವಶಕ್ಕೆ
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 12, 2023 | 2:25 PM

Share

ಮೈಸೂರು: ವಿವಿಧ ಪ್ರಕರಣಗಳಲ್ಲಿ ತಗಲಾಕ್ಕೊಂಡು ತಲೆಮರೆಸಿಕೊಂಡಿರುವ ಉದ್ಯಮಿ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿ (Santro Ravi) ಸಲ್ಲಿಸಿದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಕಾಲಾವಕಾಶ ಕೇಳಿದ ಹಿನ್ನಲೆ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಕೆಗೆ ಜನವರಿ 17ರವರೆಗೆ ಅವಕಾಶ ನೀಡಿದೆ. ಹೀಗಾಗಿ ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು. ಈ ಹಿಂದಿನ ವಿಚಾರಣೆ ವೇಳೆ ಇಂದು ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ಆದರೆ ಪೊಲೀಸರು ಇಂದು ಮತ್ತೆ ಅವಕಾಶ ಕೇಳಿದ ಹಿನ್ನಲೆ ಮನವಿಯನ್ನು ಕೋರ್ಟ್ ಪುರಸ್ಕರಿಸಿ ಸಮಯಾವಕಾಶ ನೀಡಿತು.

ಇನ್ನೊಂದೆಡೆ ಸ್ಯಾಂಟ್ರೋ ರವಿ ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿರುವ ಪೊಲೀಸರು ರವಿ ಆಪ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್​ನನ್ನು ರಾಮನಗರ ಎಸ್​ಪಿ ಸಂತೋಷ್​ ಬಾಬು ನೇತೃತ್ವದ ತಂಡ ವಶಕ್ಕೆ ಪಡೆದಿದೆ. ರಾಮನಗರ ಜಿಲ್ಲೆಯ ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಶೋಧ ನಡೆಸುತ್ತಿದ್ದಾಗ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರದಲ್ಲಿ 2 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸಲು ಮೈಸೂರಿನಿಂದ ಆಗಮಿಸಿದ್ದ ಪೊಲೀಸರು ಶೋಧ ನಡೆಸುತ್ತಿದ್ದರು. ಈ ವಿಚಾರ ತಿಳಿದ ಸ್ಯಾಂಟ್ರೋ ರವಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್​​: ಪ್ರಕರಣ ಸಿಸಿಬಿಗೆ ವರ್ಗಾಯಿಸಿ ಕಮಿಷನರ್​ ಪ್ರತಾಪ್ ರೆಡ್ಡಿ​​ ಆದೇಶ

ಕರ್ನಾಟಕ-ಕೇರಳ ಗಡಿಯಲ್ಲೂ ಸ್ಯಾಂಟ್ರೋ ರವಿಗಾಗಿ ಹುಡುಕಾಟ

ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲೂ ಶೋಧ ನಡೆಸಲಾಗುತ್ತಿದೆ. ಸ್ಯಾಂಟ್ರೋ ಮಿತ್ರರ ಬಳಗವನ್ನೆಲ್ಲ ಸಂಪರ್ಕಿಸಿರುವ ಪೊಲೀಸರು‌, ಪ್ರತಿ ಜಿಲ್ಲೆಯಲ್ಲೂ ಸ್ಯಾಂಟ್ರೋಗಾಗಿ ಒಂದೊಂದು ತಂಡ ರಚನೆ‌ ಮಾಡಲಾಗಿದೆ. ಸದ್ಯ ಮೂರ್ನಾಲ್ಕು ಜಾಗಗಳಲ್ಲಿ ರವಿ ತಲೆಮರೆಸಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸುಳಿವು ಇರುವ ಜಿಲ್ಲೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. 7-8 ಜಿಲ್ಲೆಗಳಲ್ಲಿ ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Thu, 12 January 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್