AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು, ಕಾರು ಚಾಲಕ ಪೊಲೀಸರ ವಶಕ್ಕೆ

ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ಕರ್ನಾಟಕ-ಕೇರಳ ಗಡಿಯಲ್ಲೂ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು, ಹೈಫೈ ರೆಸಾರ್ಟ್​​ಗಳಲ್ಲೂ ಶೋಧ ನಡೆಸುತ್ತಿದ್ದಾರೆ. ಸ್ಯಾಂಟ್ರೋ ಮಿತ್ರರ ಬಳಗವನ್ನೆಲ್ಲ ಸಂಪರ್ಕಿಸಿರುವ ಪೊಲೀಸರು‌, ಪ್ರತಿ ಜಿಲ್ಲೆಯಲ್ಲೂ ಶೋಧ ನಡೆಸುತ್ತಿದ್ದಾರೆ.‌

Santro Ravi: ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು, ಕಾರು ಚಾಲಕ ಪೊಲೀಸರ ವಶಕ್ಕೆ
ಸ್ಯಾಂಟ್ರೋ ರವಿ
TV9 Web
| Updated By: Rakesh Nayak Manchi|

Updated on:Jan 12, 2023 | 2:25 PM

Share

ಮೈಸೂರು: ವಿವಿಧ ಪ್ರಕರಣಗಳಲ್ಲಿ ತಗಲಾಕ್ಕೊಂಡು ತಲೆಮರೆಸಿಕೊಂಡಿರುವ ಉದ್ಯಮಿ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿ (Santro Ravi) ಸಲ್ಲಿಸಿದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಕಾಲಾವಕಾಶ ಕೇಳಿದ ಹಿನ್ನಲೆ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಕೆಗೆ ಜನವರಿ 17ರವರೆಗೆ ಅವಕಾಶ ನೀಡಿದೆ. ಹೀಗಾಗಿ ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು. ಈ ಹಿಂದಿನ ವಿಚಾರಣೆ ವೇಳೆ ಇಂದು ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ಆದರೆ ಪೊಲೀಸರು ಇಂದು ಮತ್ತೆ ಅವಕಾಶ ಕೇಳಿದ ಹಿನ್ನಲೆ ಮನವಿಯನ್ನು ಕೋರ್ಟ್ ಪುರಸ್ಕರಿಸಿ ಸಮಯಾವಕಾಶ ನೀಡಿತು.

ಇನ್ನೊಂದೆಡೆ ಸ್ಯಾಂಟ್ರೋ ರವಿ ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿರುವ ಪೊಲೀಸರು ರವಿ ಆಪ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್​ನನ್ನು ರಾಮನಗರ ಎಸ್​ಪಿ ಸಂತೋಷ್​ ಬಾಬು ನೇತೃತ್ವದ ತಂಡ ವಶಕ್ಕೆ ಪಡೆದಿದೆ. ರಾಮನಗರ ಜಿಲ್ಲೆಯ ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಶೋಧ ನಡೆಸುತ್ತಿದ್ದಾಗ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರದಲ್ಲಿ 2 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸಲು ಮೈಸೂರಿನಿಂದ ಆಗಮಿಸಿದ್ದ ಪೊಲೀಸರು ಶೋಧ ನಡೆಸುತ್ತಿದ್ದರು. ಈ ವಿಚಾರ ತಿಳಿದ ಸ್ಯಾಂಟ್ರೋ ರವಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್​​: ಪ್ರಕರಣ ಸಿಸಿಬಿಗೆ ವರ್ಗಾಯಿಸಿ ಕಮಿಷನರ್​ ಪ್ರತಾಪ್ ರೆಡ್ಡಿ​​ ಆದೇಶ

ಕರ್ನಾಟಕ-ಕೇರಳ ಗಡಿಯಲ್ಲೂ ಸ್ಯಾಂಟ್ರೋ ರವಿಗಾಗಿ ಹುಡುಕಾಟ

ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲೂ ಶೋಧ ನಡೆಸಲಾಗುತ್ತಿದೆ. ಸ್ಯಾಂಟ್ರೋ ಮಿತ್ರರ ಬಳಗವನ್ನೆಲ್ಲ ಸಂಪರ್ಕಿಸಿರುವ ಪೊಲೀಸರು‌, ಪ್ರತಿ ಜಿಲ್ಲೆಯಲ್ಲೂ ಸ್ಯಾಂಟ್ರೋಗಾಗಿ ಒಂದೊಂದು ತಂಡ ರಚನೆ‌ ಮಾಡಲಾಗಿದೆ. ಸದ್ಯ ಮೂರ್ನಾಲ್ಕು ಜಾಗಗಳಲ್ಲಿ ರವಿ ತಲೆಮರೆಸಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸುಳಿವು ಇರುವ ಜಿಲ್ಲೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. 7-8 ಜಿಲ್ಲೆಗಳಲ್ಲಿ ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Thu, 12 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ