AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು

ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ನದಿಯಲ್ಲಿ ಮುಳುಗಿ ಸಾವನ್ನಪಿದ್ದಾರೆ.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು
ಮೃತ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 22, 2023 | 12:52 PM

Share

ಮುಖ್ಯಾಂಶಗಳು

  • ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು
  • ಅಕ್ರಮವಾಗಿ ಮದ್ಯ ಸೇವಿಸಿ ಸಾವು ಆರೋಪ; ಮೃತದೇಹವಿಟ್ಟು ಪ್ರತಿಭಟನೆ
  • ಅನೇಕಲ್​ ಬಳಿ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಚಾಲಕ ಸಾವು

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ಸಾವನ್ನಪಿದ್ದಾರೆ. ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ನಿವಾಸಿ ಗಂಗಾಧರ್ ಮೃತ ರ್ದುದೈವಿ. ಇಂದು ನಾಡಿನಾದ್ಯಂತ ಯುಗಾದಿ ಹಬ್ಬ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಹಿನ್ನಲೆ ಟಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಮುಳುಗಿ ಸಾವನ್ನಪಿದ್ದಾರೆ. ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಟೈನರ್​ಗೆ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಚಾಲಕ ಸಾವು

ಬೆಂಗಳೂರು ಗ್ರಾಮಾಂತರ: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಾಕಿದ ಪರಿಣಾಮ ಕಂಟೇನರ್ ಸ್ಥಳದಲ್ಲೇ ಹೊತ್ತಿ ಉರಿದು ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಖಾಸಗಿ ಆಸ್ಪತ್ರೆಗೆ ಆತನನ್ನ ಸೇರಿಸಲಾಗಿತ್ತು. ಇದೀಗ ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಸಾವನ್ನಪಿದ್ದಾನೆ.

ಇದನ್ನೂ ಓದಿ:ಕೋಲಾರ: ಮಗಳನ್ನು ಏರ್​ಪೋರ್ಟ್​ಗೆ ಬಿಟ್ಟು ಬರುವಾಗ ಕಾರು ಅಪಘಾತ; ತಂದೆ ತಾಯಿ ಸ್ಥಳದಲ್ಲೇ ಸಾವು

ಅಕ್ರಮವಾಗಿ ಮದ್ಯ ಸೇವಿಸಿ ವ್ಯಕ್ತಿ ಸಾವು ಆರೋಪ; ಮೃತದೇಹವಿಟ್ಟು ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸೇವಿಸಿ ಪುಟ್ಟೇಗೌಡ(60) ಎಂಬಾತ ಸಾವನ್ನಪ್ಪಿದ್ದು, ಆತನ ಮೃತದೇಹ ಇಟ್ಟು ಕೊಪ್ಪ ತಾಲೂಕಿನ ಹಿತ್ಲೆಗುಳಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ(ಮಾ.21) ಸಂಜೆ ಮದ್ಯ ಸೇವಿಸಿ ಗ್ರಾಮದ ಪುಟ್ಟೇಗೌಡ ಮೃತಪಟ್ಟಿದ್ದಾನೆ. ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಇದು ಸೇರಿ ಮೂರನೇ ವ್ಯಕ್ತಿ ಸಾವನ್ನಪಿದ್ದು, ಅಕ್ರಮವಾಗಿ ಮಾರುತ್ತಿರುವ ಮದ್ಯ ಸೇವನೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್​ಪಿ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಕುಣಿಗಲ್​ ನಿವಾಸಿಗಳಾದ ಚೇತನ್​(28), ಕಿರಣ್​(19) ಸಾವನ್ನಪಿದ್ದಾರೆ. ಕುಣಿಗಲ್​ನಿಂದ ಹುಲಿಯೂರುದುರ್ಗದ ಕಡೆಗೆ ಹೋಗುತ್ತಿದ್ದಾಗ ಬೈಕ್​​​ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ಸಾವಿಗೀಡಾಗಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?