AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು

ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ನದಿಯಲ್ಲಿ ಮುಳುಗಿ ಸಾವನ್ನಪಿದ್ದಾರೆ.

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು
ಮೃತ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 22, 2023 | 12:52 PM

Share

ಮುಖ್ಯಾಂಶಗಳು

  • ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಹೋಗಿ ಎಸ್​ಬಿಐ ನೌಕರ ಸಾವು
  • ಅಕ್ರಮವಾಗಿ ಮದ್ಯ ಸೇವಿಸಿ ಸಾವು ಆರೋಪ; ಮೃತದೇಹವಿಟ್ಟು ಪ್ರತಿಭಟನೆ
  • ಅನೇಕಲ್​ ಬಳಿ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಚಾಲಕ ಸಾವು

ಮೈಸೂರು: ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್​ಬಿಐ(SBI) ನೌಕರ ಸಾವನ್ನಪಿದ್ದಾರೆ. ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ನಿವಾಸಿ ಗಂಗಾಧರ್ ಮೃತ ರ್ದುದೈವಿ. ಇಂದು ನಾಡಿನಾದ್ಯಂತ ಯುಗಾದಿ ಹಬ್ಬ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಹಿನ್ನಲೆ ಟಿ.ನರಸೀಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಮುಳುಗಿ ಸಾವನ್ನಪಿದ್ದಾರೆ. ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಟೈನರ್​ಗೆ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಚಾಲಕ ಸಾವು

ಬೆಂಗಳೂರು ಗ್ರಾಮಾಂತರ: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಾಕಿದ ಪರಿಣಾಮ ಕಂಟೇನರ್ ಸ್ಥಳದಲ್ಲೇ ಹೊತ್ತಿ ಉರಿದು ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಖಾಸಗಿ ಆಸ್ಪತ್ರೆಗೆ ಆತನನ್ನ ಸೇರಿಸಲಾಗಿತ್ತು. ಇದೀಗ ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಸಾವನ್ನಪಿದ್ದಾನೆ.

ಇದನ್ನೂ ಓದಿ:ಕೋಲಾರ: ಮಗಳನ್ನು ಏರ್​ಪೋರ್ಟ್​ಗೆ ಬಿಟ್ಟು ಬರುವಾಗ ಕಾರು ಅಪಘಾತ; ತಂದೆ ತಾಯಿ ಸ್ಥಳದಲ್ಲೇ ಸಾವು

ಅಕ್ರಮವಾಗಿ ಮದ್ಯ ಸೇವಿಸಿ ವ್ಯಕ್ತಿ ಸಾವು ಆರೋಪ; ಮೃತದೇಹವಿಟ್ಟು ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸೇವಿಸಿ ಪುಟ್ಟೇಗೌಡ(60) ಎಂಬಾತ ಸಾವನ್ನಪ್ಪಿದ್ದು, ಆತನ ಮೃತದೇಹ ಇಟ್ಟು ಕೊಪ್ಪ ತಾಲೂಕಿನ ಹಿತ್ಲೆಗುಳಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ(ಮಾ.21) ಸಂಜೆ ಮದ್ಯ ಸೇವಿಸಿ ಗ್ರಾಮದ ಪುಟ್ಟೇಗೌಡ ಮೃತಪಟ್ಟಿದ್ದಾನೆ. ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಇದು ಸೇರಿ ಮೂರನೇ ವ್ಯಕ್ತಿ ಸಾವನ್ನಪಿದ್ದು, ಅಕ್ರಮವಾಗಿ ಮಾರುತ್ತಿರುವ ಮದ್ಯ ಸೇವನೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್​ಪಿ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್​ನಿಂದ ಬಿದ್ದು ಕುಣಿಗಲ್​ ನಿವಾಸಿಗಳಾದ ಚೇತನ್​(28), ಕಿರಣ್​(19) ಸಾವನ್ನಪಿದ್ದಾರೆ. ಕುಣಿಗಲ್​ನಿಂದ ಹುಲಿಯೂರುದುರ್ಗದ ಕಡೆಗೆ ಹೋಗುತ್ತಿದ್ದಾಗ ಬೈಕ್​​​ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ಸಾವಿಗೀಡಾಗಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​